ಐತಿಹಾಸಿಕ ಸ್ಮಾರಕಗಳ ರಕ್ಷಣೆ-ಹಸರೀಕರಣ-ಸ್ವಚ್ಛತೆಗಾಗಿ ಡಿ.7ರಂದು ವೃಕ್ಷೋತ್ಥಾನ ಹೆರಿಟೇಜ್ ರನ್- ಸ್ವಯಂ ಪ್ರೇರಿತವಾಗಿ ಭಾಗವಹಿಸಿ ಯಶಸ್ವಿಗೆ -ಸಚಿವ ಎಂ.ಬಿ.ಪಾಟೀಲ ಕರೆ
ಐತಿಹಾಸಿಕ ಸ್ಮಾರಕಗಳ ರಕ್ಷಣೆ-ಹಸರೀಕರಣ-ಸ್ವಚ್ಛತೆಗಾಗಿ ಡಿ.7ರಂದು ವೃಕ್ಷೋತ್ಥಾನ ಹೆರಿಟೇಜ್ ರನ್- ಸ್ವಯಂ ಪ್ರೇರಿತವಾಗಿ ಭಾಗವಹಿಸಿ ಯಶಸ್ವಿಗೆ -ಸಚಿವ ಎಂ.ಬಿ.ಪಾಟೀಲ ಕರೆ ವಿಜಯಪುರ, ಸೆಪ್ಟೆಂಬರ್ 20 (ಕರ್ನಾಟಕ ವಾರ್ತೆ): ಐತಿಹಾಸಿಕ ಸ್ಮಾರಕಗಳ ರಕ್ಷಣೆ, ಹಸರೀಕರಣಕ್ಕಾಗಿ, ಸ್ವಚ್ಛತೆಗಾಗಿ 2025ನೇ ಸಾಲಿನ ಡಿಸೆಂಬರ್ 7 ರಂದು ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ವೃಕ್ಷೋತ್ಥಾನ ಹೆರಿಟೇಜ್ ರನ್ನಲ್ಲಿ ಜಿಲ್ಲಾಡಳಿತ, ಸ್ವಯಂ ಸೇವಾ ಸಂಘ-ಸಂಸ್ಥೆಗಳು, ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಸಕ್ರೀಯವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಎಂ.ಬಿ.ಪಾಟೀಲ ಕರೆ ನೀಡಿದರು. ಶನಿವಾರ ಸಂಜೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡ ವೃಕ್ಷೋತ್ಥಾನ ಹೆರಿಟೇಜ್ ರನ್ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು ಜಿಲ್ಲೆಯಲ್ಲಿ ಕಳೆದ 2016 ರಿಂದ ಕೋಟಿ ವೃಕ್ಷ ಅಭಿಯಾನ ಆರಂಭಿಸಲಾಗಿದ್ದು, ವೃಕ್ಷೋತ್ಥಾನ ಆರಂಭದಿಂದ ಇಲ್ಲಿಯವರೆಗೆ ಕೋಟಿ ವೃಕ್ಷ ಅಭಿಯಾನದಡಿ ಜಿಲ್ಲೆಯಲ್ಲಿ 1.50 ಕೋಟಿ ಸಸಿಗಳನ್ನು ನೆಟ್ಟು ಪೋಷಿಸಲಾಗುತ್ತಿದೆ. ಆ ಮೂಲಕ ಅತ್ಯಂತ ಕಡಿಮೆ ಇದ್ದ ಜಿಲ್ಲೆಯ ಅರಣ್ಯ ಪ್ರದೇಶವನ್ನು ರಾಜ್ಯದ ಅರಣ್ಯ ಪ್ರದೇಶ ಸರಾಸರಿ ಸಮತೋಲಕ್ಕೆ ತರುವ ನಿಟ್ಟಿನಲ್ಲಿ ...