ಕುರುಬ ಸಮಾಜಕ್ಕೆ ಎಸ್.ಟಿ ಮಿಸಲಾತಿಗೆ ಆಗ್ರಹ.
ಇಂಡಿ: ಕುರುಬ ಸಮಾಜಕ್ಕೆ ಪರಿಶಿಷ್ಠ ಪಂಗಡ (ಎಸ್.ಟಿ) ಮೀಸಲಾತಿ ನೀಡಲು ಕಾಗಿನೆಲೆಯ ನಿರಂಜನಾನಂದ ಶ್ರೀಗಳ ನೇತೃತ್ವದಲ್ಲಿ ಹಮ್ಮಿಕೊಂಡ ಬೆಂಗಳೂರು ಚಲೋ ಪಾದಯಾತ್ರೆಯಲ್ಲಿ ಇಂಡಿ ತಾಲ್ಲೂಕಿನ ಕುರುಬ ಸಮಾಜ ಬಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕುರುಬ ಸಮಾಜದ ಯುವ ಮುಖಂಡ, ಬಬಲಾದ ಗ್ರಾಮ ಪಂಚಾಯತ್ ಸದಸ್ಯ ಯಲಗೊಂಡ ಪೂಜಾರಿ ಮನವಿ ಮಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವೀರ ಸಂಗೊಳ್ಳಿ ರಾಯಣ್ಣ, ಕನಕದಾಸರರು, ಸೇರಿದಂತೆ ಅನೇಕ್ ಮಹಾಂತ ಶರಣರು ನಮ್ಮ ಸಮುದಾಯದಲ್ಲಿ ಆಗಿ ಹೋಗಿದ್ದಾರೆ. ನಮ್ಮ ಸಮುದಾಯ ಆರ್ಥಿಕ, ಶೈಕ್ಷಣಿಕ ಮತ್ತು ರಾಜಕೀಯವಾಗಿ ಅತೀ ಹಿಂದುಳಿದ ಸಮುದಾಯವಾಗಿದೆ. ಸಮುದಾಯದವರನ್ನು ಮೇಲೆತ್ತಲು ನಮಗೆ ಮೀಸಲಾತಿಯ ಅವಶ್ಯಕತೆ ಇದೆ. ಶ್ರೀಗಳು ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದ ಕೆ.ಎಸ್. ಈಶ್ವರಪ್ಪ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ಮತ್ತು ಪ್ರತಿಭಟನೆಗೆ ರಾಜ್ಯದ ಕುರುಬ ಸಮುದಾಯ ಬೆಂಬಲ ಸೂಚಿಸಬೇಕು. ಇಂಡಿ ತಾಲ್ಲೂಕಿನಿಂದಲೂ ಸಾಕಷ್ಟು ಜನ ಈಗಾಗಲೆ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಇನ್ನೂ ಹೆಚ್ಚಿನ ಜನ ಸೇರಿ ಪಾದಯಾತ್ರೆ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು. ಪಂಚಮಸಾಲಿ ಸಮಾಜ ಬಾಂಧವರು 2ಎ ಮೀಸಲಾತಿ ಕೇಳುತ್ತಿದ್ದು ಅವರಲ್ಲಿಯೂ ಸಾಕಷ್ಟು ಜನ ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದವರಿದ್ದಾರೆ.ಹೀಗಾಗಿ ಅವರಿಗೂ ಮೀಸಲಾತಿಯ ಅವಶ್ಯವಿದ್ದು ಅವರಿಗೂ ಮೀಸಲಾತಿ ನೀಡಬೇಕೆಂದು ಮನವಿ ಮ...