ಪ್ರಜಾಪ್ರಭುತ್ವದ ಯಶಸ್ಸು ನಮ್ಮೆಲ್ಲರ ಜವಾಬ್ದಾರಿ- ಸಂತೋಷ ಬಂಡೆ

 ಪ್ರಜಾಪ್ರಭುತ್ವದ ಯಶಸ್ಸು ನಮ್ಮೆಲ್ಲರ ಜವಾಬ್ದಾರಿ- ಸಂತೋಷ ಬಂಡೆ


ಇಂಡಿ: ನಮ್ಮ ಸಂವಿಧಾನವು ದೇಶದ ಜನರನ್ನು ಸಶಕ್ತಗೊಳಿಸಿ, ಸರ್ವರಿಗೂ ಸಮಾನತೆ, ಮೂಲಭೂತ ಹಕ್ಕು-ಕರ್ತವ್ಯಗಳನ್ನು ನೀಡಿದೆ. ಭಾರತಕ್ಕೆ ಸಂವಿಧಾನವೇ ದೊಡ್ಡ ಬಲವಾಗಿದ್ದು, ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನು ಆಗಿದೆ ಎಂದು ಹಿರೇರೂಗಿ ಯುಬಿಎಸ್ ಶಾಲಾ ಶಿಕ್ಷಕ ಸಂತೋಷ ಬಂಡೆ ಹೇಳಿದರು.

        ಅವರು ಮಂಗಳವಾರದಂದು ಪಟ್ಟಣದ ಸರಕಾರಿ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಸಂವಿಧಾನ ದಿನಾಚರಣೆ ನಿಮಿತ್ತ ಹಮ್ಮಿಕೊಂಡ 'ಭಾರತದ ಸಂವಿಧಾನ ಹೆಜ್ಜೆಗಳು' ಕುರಿತ ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು.

 ಸಂವಿಧಾನ ಸರ್ವ ಜನರ ಆಸ್ತಿ. ಭಾರತದಲ್ಲಿ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಉಳಿಯಬೇಕಾದರೆ, ಸಂವಿಧಾನದ ತತ್ವಗಳನ್ನು ನಾವೆಲ್ಲರೂ ಅನುಸರಿಸಬೇಕು.

ಪ್ರಜಾಪ್ರಭುತ್ವದ ಯಶಸ್ಸು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು,

ಪ್ರತಿಯೊಬ್ಬರಿಗೂ ಸಂವಿಧಾನ ಅಧ್ಯಯನ ಮತ್ತು ಓದು ಬಹಳ ಅಗತ್ಯ ಎಂದರು.

       ಪ್ರಭಾರಿ ಪ್ರಾಚಾರ್ಯ ಪಿ ವೈ ರಜನೀಕರ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ಯುವಪೀಳಿಗೆ ರಾಷ್ಟ್ರಗೀತೆ, ರಾಷ್ಟ್ರಧ್ವಜ, ಸಂವಿಧಾನಕ್ಕೆ ಗೌರವ ನೀಡಬೇಕು. ಸಂವಿಧಾನ ನೀಡಿರುವ ಕಾನೂನುಗಳಿಗೆ ವಿಧೇಯರಾಗಿರಬೇಕು. ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಚಿಂತನೆಗಳನ್ನು ಇಂದಿನ ಯುವಸಮೂಹಕ್ಕೆ ತಿಳಿಸಬೇಕಾಗಿದೆ ಎಂದು ಹೇಳಿದರು.

        ಇದೇ ಸಂದರ್ಭದಲ್ಲಿ ಭೀಮಾಶಂಕರ ಶಿವೂರ ಭಾರತದ ಸಂವಿಧಾನ ಪೀಠಿಕೆಯನ್ನು ಓಡಿಸಿದರು. ಉಪನ್ಯಾಸಕರಾದ ಜಿ ಎಸ್ ಭಾಗೆಳ್ಳಿ, ರಮೇಶ ಮೇತ್ರಿ, ಸಂತೋಷ ಜಾಧವ, ಪ್ರೇಮಾನಂದ ದೇಸಾಯಿ, ರವಿ ಹಾದಿಮನಿ, ಅಬ್ದುಲ್ಲಾ, ರೇಶ್ಮಾ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು