ಇಂಡಿ ಉಜ್ಜೇನ್ನಿ ಬಸ್ಸು ಪುನರಾರಂಭ ಭಕ್ತ ವರ್ಗ ಹರ್ಷ

ಇಂಡಿ ಉಜ್ಜೇನ್ನಿ ಬಸ್ಸು ಪುನರಾರಂಭ ಭಕ್ತ ವರ್ಗ ಹರ್ಷ

ಇಂಡಿ: ಸುಕ್ಷೇತ್ರ ಉಜ್ಜೇನ್ನಿ ಶ್ರೀ ಮರುಳಸಿದ್ದೇಶ್ವರ ದೇವರ ದರ್ಶನ ಪಡೆಯಲು ಭಕ್ತರ ಬೇಡಿಕೆಯಂತೆ ಹಾಗೂ ಇಂಡಿ ಮತಕ್ಷೇತ್ರದ ಶಾಸಕರಾದ ಶ್ರೀ ಯಶವಂತರಾಯಗೌಡ ಪಾಟೀಲ ಅವರ ಆದೇಶದಂತೆ ಇದೆ ದಿನಾಂಕ 29-12-2024 ರಂದು  ಇಂಡಿ ಉಜ್ಜೇನ್ನಿ ಬಸ್ಸು ಮತ್ತೆ ಪುನರಾರಂಭ ಮಾಡಲಾಗಿದೆ ಎಂದು ಕಲ್ಯಾಣ ಕರ್ನಾಟಕ ಸಾರಿಗೆ ರಸ್ತೆ ಇಲಾಖೆ ಇಂಡಿ ಘಟಕ ವ್ಯವಸ್ಥಾಪಕರು ತಿಳಿಸಿದ್ದಾರೆ.ಈ ಮೊದಲು ಇಂಡಿ ಉಜ್ಜೇನ್ನಿ ಬಸ್ಸು ಸಂಚಾರ ಮಾಡುತ್ತಿತ್ತು ಆದರೆ ಕಾರಣಾಂತರದಿಂದ ಬಂದ ಮಾಡಲಾಯಿತು.ಇದೆ ದಿನಾಂಕ 25-12-2024  ಇಂಡಿ ತಾಲ್ಲೂಕಿನ ಸುಕ್ಷೇತ್ರ ತಡವಲಗಾ ಗ್ರಾಮದ ಜೋಡಗುಡಿಯ ಕಾರ್ತಿಕ ಮಾಸದ ಶ್ರೀ ಮರುಳಸಿದ್ದೇಶ್ವರ ಜಾತ್ರೆ ನಿಮಿತ್ತವಾಗಿ ಸರ್ವಧರ್ಮ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಾನ್ನಿಧ್ಯವನ್ನು ವಹಿಸಿದ ಶ್ರೀ ಉಜ್ಜೇನ್ನಿ ಜಗದ್ಗುರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ  ಇಂಡಿ ಶಾಸಕರಾದ ಯಶವಂತರಾಯಗೌಡ ಪಾಟೀಲ ಅವರ ಗಮನಕ್ಕೆ ತಂದ್ದಿದರು, ಇದಕ್ಕೆ ಸ್ಪಂದಿಸಿದ ಶಾಸಕರು ಮತ್ತೆ ಇಂಡಿ ಉಜ್ಜೇನ್ನಿ ಬಸ್ಸು ಪ್ರಾರಂಭಿಸಲು ಆದೇಶಿಸಿದ್ದರು.ಅದರಂತೆ ಇಂದು ಬಸ್ಸು ಪ್ರಾರಂಭಿಸಲಾಗಿದೆ.ಅದರಂತೆ ಇಂಡಿ ತಾಲ್ಲೂಕಿನ ತಡವಲಗಾ ಗ್ರಾಮಕ್ಕೆ ಇಂಡಿ ಉಜ್ಜೇನ್ನಿ ಬಸ್ಸು ಜೋಡಗುಡಿ ಬರುತ್ತಿದ್ದಂತೆ ನೂರಾರು ಜನ ಸೇರಿ ಶ್ರೀ ಮರುಳಸಿದ್ದೇಶ್ವರ ದೇವಾಸ್ಥಾನದ ಹತ್ತಿರ ಬಸ್ಸು ತಡೆದು ಬ‌ಸ್ಸಿಗೆ ವೀಶಷ ಪೂಜೆ ಸಲ್ಲಿಸಿ, ಜೋಡಗುಡಿ ಸಾರಿಗೆ ನಿಯಂತ್ರಣ ಅಧಿಕಾರಿ ಸುರೇಶ ಚನಗೊಂಡ,ಬಸ್ಸು ಚಾಲಕ ಮಲ್ಲಿಕಾರ್ಜುನ ಲೋಣಿ ಹಾಗೂ ನಿರ್ವಾಹಕ ಪಂಡಿತ ರಾಠೋಡ  ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.ಈ ಬಸ್ಸು ಪ್ರತಿ ನಿತ್ಯ ಇಂಡಿ ಯಿಂದ ಬೆಳಿಗ್ಗೆ 07-30 ಹೋರಟು ತಡವಲಗಾ ವಿಜಯಪೂರ ಆಲಮಟ್ಟಿ ಇಲಕಲ್ ಕುಷ್ಟಗಿ ಹೊಸಪೇಟೆ ಮಾರ್ಗವಾಗಿ ಉಜ್ಜೇನ್ನಿ ತಲುಪುವುದು, ಮಾರನೇದಿನ ಬೆಳಿಗ್ಗೆ 07-30 ಗಂಟೆಗೆ ಉಜ್ಜೇನ್ನಿ ಯಿಂದ ಹೊರಟು ಸಂಜೆ ನಾಲ್ಕು ಗಂಟೆಗೆ ಇಂಡಿ ತಲುಪುವುದು.ಈ ಸಂದರ್ಭದಲ್ಲಿ ಬಾಬುಸಾಹುಕಾರ ಮೇತ್ರಿ, ತಮ್ಮಣ್ಣ ಪೂಜಾರಿ, ಅಶೋಕ ಮಿರ್ಜಿ,ಸಾಹೇಬಗೌಡ ಇಂಡಿ, ಲಕ್ಷ್ಮಣ್ ಖಸ್ಕಿ, ರಾಜು ಮಿರ್ಜಿ, ಚನ್ನಪ್ಪ ಮಿರಗಿ ಶೇಂಕ್ರಪ್ಪ ರೂಗಿ,ಸುರೇಶ ಗೊಳ್ಳಗಿ, ಬಸವರಾಜ ಚವಡಿಹಾಳ, ಪ್ರಕಾಶ್ ಮಿರಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು