ಭ್ರಷ್ಟಾಚಾರ ವಿರೋಧಿ ದಿನಾಚರಣೆ ಕಾರ್ಯಕ್ರಮದ ವರದಿ
ಭ್ರಷ್ಟಾಚಾರ ವಿರೋಧಿ ದಿನಾಚರಣೆ ಕಾರ್ಯಕ್ರಮದ ವರದಿ
ಇಂಡಿ ಪಟ್ಟಣದ ಎಸ್.ಎಸ್.ವಿ.ವಿ.ಸಂಘದ ಶ್ರೀ ಜಿ.ಆರ್.ಗಾಂಧಿ ಕಲಾ, ಶ್ರೀ ವಾಯ್.ಎ.ಪಾಟೀಲ ವಾಣಿಜ್ಯ ಹಾಗೂ ಶ್ರೀ ಎಮ್.ಪಿ.ದೋಶಿ ವಿಜ್ಞಾನ ಪದವಿ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕ & ರಾಜ್ಯಶಾಸ್ತç ವಿಭಾಗದ ಅಡಿಯಲ್ಲಿ ಭ್ರಷ್ಟಾಚಾರ ವಿರೋಧಿ ದಿನಾಚರಣೆ ಕಾರ್ಯಕ್ರಮ ಜರುಗಿತು.
ಈ ಕಾರ್ಯಕ್ರಮದ ಸಹಾಯಕ ಪ್ರಾಧ್ಯಾಪಕರಾದ ಡಾ.ಜಯಪ್ರಸಾದ ಡಿ. ಅವರು ಮಾತನಾಡುತ್ತಾ “ಇಂದು ಅಂತರ್ರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನ. ಪ್ರತಿ ವರ್ಷ ಡಿಸೆಂಬರ್ ೯ ರಂದು ಅಂತರರಾಷ್ಟ್ರೀಯ ಭ್ರಷ್ಟಚಾರ ವಿರೋಧಿ ದಿನವನ್ನು ಆಚರಣೆ ಮಾಡಲಾಗುತ್ತದೆ. ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಹಾಗು ಜನರು ಭ್ರಷ್ಟಾಚಾರವನ್ನು ಹೇಗೆ ತಡೆಯಬಹುದು ಮತ್ತು ಭ್ರಷ್ಟಾಚಾರವನ್ನು ಸಮರ್ಥವಾಗಿ ಮತ್ತು ಪರಿಣಾಮಕಾರಿಯಾಗಿ ಎದುರಿಸುವ ಕ್ರಮಗಳನ್ನು ಬಲಪಡಿಸುವ ಸಲುವಾಗಿ ಪ್ರತಿವರ್ಷ ಡಿಸೆಂಬರ್ ೯ ರಂದು ಅಂತರರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನವನ್ನು ಆಚರಣೆ ಮಾಡಲಾಗುತ್ತದೆ.” ಎಂದು ಹೇಳಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ನಮ್ಮ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಸ್.ಬಿ.ಜಾಧವ ಅವರು ಮಾತನಾಡುತ್ತ ಸಮಾಜದಲ್ಲಿ ಭ್ರಷ್ಟಾಚಾರವು “ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಯನ್ನು ಹಾಳುಮಾಡುತ್ತಿರುವ ಗಂಭೀರ ಪಿಡುಗಾಗಿದೆ. ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅನಿವಾರ್ಯವಾಗಿದೆ. ಶಿಕ್ಷಣ, ಆರೋಗ್ಯ, ರಾಜಕೀಯ, ಕ್ರೀಡೆ, ನ್ಯಾಯ, ದೇಶದ ಅಭಿವೃದ್ಧಿ ಎಲ್ಲಾ ಕ್ಷೇತ್ರದಲ್ಲೂ ಭ್ರಷ್ಟಾಚಾರ ಆಳವಾಗಿ ಬೇರೂರಿದೆ. ಇದರಿಂದ ಉಂಟಾಗುವ ಸಮಸ್ಯೆಗಳು ಗಂಭೀರವಾಗಿವೆ. ಪ್ರಜಾಪ್ರಭುತ್ವ, ಸಮಾಜದ ಭದ್ರತೆ, ನೈತಿಕ ಮೌಲ್ಯ, ನ್ಯಾಯ ಸಂಸ್ಥೆಯ ಮೌಲ್ಯಗಳನ್ನು ಭ್ರಷ್ಟಾಚಾರ ಎಂಬ ಪಿಡುಗು ದುರ್ಬಲಗೊಳಿಸುತ್ತಿದೆ.” ಎಂದು ಹೇಳಿದರು.
ಈ ಕಾರ್ಯಕ್ರಮದ ನಿರೂಪಣೆಯನ್ನು ಸಹಾಯಕ ಪ್ರಾಧ್ಯಾಪಕರಾದ ಡಾ.ಸುರೇದ್ರ ಕೆ, ವಂದನಾರ್ಪಣೆಯನ್ನು ಎನ್ಎಸ್ಎಸ್ ಘಟಕದ ಕಾರ್ಯಕ್ರಮಾಧಿಕಾರಿಗಳಾದÀ ಡಾ. ಪಿ.ಕೆ.ರಾಠೋಡ ಅವರು ನಿರ್ವಹಿಸಿದರು.
ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕರಾದ ಡಾ.ಆನಂದ ಸಿ. ನಡವಿನಮನಿ ಸಹಾಯಕ ಪ್ರಾಧ್ಯಾಪಕರಾದ ಡಾ. ವಿಶ್ವಾಸ್. ಕೋರವಾರ, ಶ್ರೀ.ಶ್ರೀಶೈಲ, ಡಾ. ಸಿ.ಎಸ್.ಬಿರಾದಾರ, ಡಾ. ಶ್ರೀಕಾಂತ ರಾಠೋಡ, ಶ್ರೀ ಎಮ್.ಆರ್ ಕೋಣದೆ, ಶೃತಿ ಪಾಟೀಲ, ಶ್ವೇತಾ ಕಾಂತ, ಪಂಕಜಾ ಕುಲಕರ್ಣಿ, ಶೃತಿ ಬಿರಾದಾರ, ಶ್ರೀ.ಪರಶುರಾಮ ಅಜಮನಿ, ನಸ್ರೀನ ವಾಲಿಕಾರ, ಧಾನಮ್ಮ ಪಾಟೀಲ, ಬೋಧಕೇತರ ಸಿಬ್ಬಂದಿ & ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ