ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ದ್ವಿತೀಯ ಪುಣ್ಯಸ್ಮರಣೆ ಹಾಗೂ ಸೇವಾದಳ ಸಪ್ತಾಹ ಆಚರಣೆ

 ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ದ್ವಿತೀಯ ಪುಣ್ಯಸ್ಮರಣೆ ಹಾಗೂ ಸೇವಾದಳ ಸಪ್ತಾಹ ಆಚರಣೆ.


ಇಂ
ಡಿ:ನಡೆದಾಡುವ ದೇವರಾದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ತತ್ವ,ಆದಶ೯ಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ನಡೆಯಬೇಕು. ಭಾರತ ಸೇವಾದಳ ಶಿಸ್ತಿನ ಸಂಸ್ಥೆಯಾಗಿದ್ದು, ಇಲ್ಲಿ ಭಾಗವಹಿಸುವ ಎಲ್ಲ ಶಿಕ್ಷಕರು, ಮಕ್ಕಳು ಶಿಸ್ತಿಗೆ ಬದ್ದರಾಗಿರಬೇಕು. ಹಾಗೂ ಇಲ್ಲಿ ಶಿಸ್ತು, ಸಮಯಪ್ರಜ್ಞೆ, ಸೇವಾ ಮನೋಭಾವನೆ, ಶಾರೀರಿಕ ಚಟುವಟಿಕೆಗಳನ್ನು ಉತ್ತಮವಾಗಿ ಕಲಿತು ತಮ್ಮ ಶಾಲಾ ಮಕ್ಕಳಿಗೆ ಕಲಿಸಬೇಕು. ಮಕ್ಕಳಲ್ಲಿ ದೇಶಾಭಿಮಾನವನ್ನು ಬೆಳೆಸಬೇಕೆಂದು ಭಾರತ ಸೇವಾದಳ ವಲಯ ಸಂಘಟಕ ನಾಗೇಶ ಡೋಣೂರ ಹೇಳಿದರು.                                

ಭಾರತ ಸೇವಾದಳ ಜಿಲ್ಲಾ ಸಮಿತಿ ವಿಜಯಪುರ, ಶಾಲಾ ಶಿಕ್ಷಣ ಇಲಾಖೆ ವಿಜಯಪುರ, ಭಾರತ ಸೇವಾದಳ ಎಲ್ಲಾ ತಾಲೂಕು ಸಮಿತಿ ಹಾಗೂ ಸರ್ಕಾರಿ ಪ್ರೌಢಶಾಲೆ ಇಂಡಿ ಇವರುಗಳ ಸಹಯೋಗದಲ್ಲಿ  ಹಮ್ಮಿಕೊಂಡಿದ್ದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ದ್ವಿತೀಯ ಪುಣ್ಯ ಸ್ಮರಣೆ ಹಾಗೂ ಸೇವಾದಳ ಸಪ್ತಾಹ ಆಚರಣೆ ಕಾರ್ಯಕ್ರಮದಲ್ಲಿ ಪೂಜ್ಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.                          

  ಭಾರತ ಸೇವಾದಳ ಕಾರ್ಯಚಟುವಟಿಕೆಗಳು, ರಾಷ್ಟ್ರಧ್ವಜ ಆರೋಹಣ, ಅವರೋಹಣ ಮತ್ತು ಶಾರೀರಿಕ, ನೈತಿಕ ಯೋಗ ಮತ್ತು ಮೌಲ್ಯ ಶಿಕ್ಷಣವನ್ನು ನೀಡುವುದರ ಜೊತೆಗೆ ದೇಶಪ್ರೇಮ, ರಾಷ್ಟ್ರೀಯ ಭಾವೈಕ್ಯತೆ ಮೂಡಿಸುವಲ್ಲಿ ಮಹತ್ವದ ಸಂಸ್ಥೆಯಾಗಿದೆ ಎಂದರು.                                  

ಸೇವಾದಳ ಜಿಲ್ಲಾ ಸಂಪನ್ಮೂಲ ಶಿಕ್ಷಕ ಜಿ ಜಿ ಬರಡೋಲ, ಸೇವಾದಳದ ಹುಟ್ಟು, ಬೆಳವಣಿಗೆ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. 

        ಶಾಲಾ ಮುಖ್ಯೋಪಾಧ್ಯಾಯ ಪಿ ಎನ್ ಸೋನಾವನೆ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಭಾರತ ಸೇವಾದಳ ತಾಲೂಕು ಅಧಿನಾಯಕ ಎಸ್ ಬಿ ಕಲ್ಲೊಳ್ಳಿ, ಸೇವಾದಳ ಶಾಖಾ ನಾಯಕಿ ಎ ಎಪ್ ಚವ್ಹಾಣ,ಹಿರಿಯ ಶಿಕ್ಷಕರಾದ ಎಮ್ ಎಸ್ ಚಲವಾದಿ ಹಾಗೂ ಶಾಲಾ ಶಿಕ್ಷಕ ವೃಂದ, ಬಿಎಡ್  ಪ್ರಶಿಕ್ಷಣಾರ್ಥಿಗಳು, ಸೇವಾದಳ ಮಕ್ಕಳು, ಶಾಲಾ ವಿದ್ಯಾರ್ಥಿಗಳು  ಉಪಸ್ಥಿತರಿದ್ದರು. 

    ಯೋಗ ಶಿಕ್ಷಕ ಬಿ ಎಸ್ ಪಾಟೀಲ  ನಿರೂಪಿಸಿದರು. ಎ ಎಪ್ ಚವ್ಹಾಣ ಸ್ವಾಗತಿಸಿದರು. ಶಿಕ್ಷಕ ಬಿ ಎಸ್ ತೆಗ್ಗಳ್ಳಿ ವಂದಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು