ಕೆಜಿಪಿಎ ಅಸೋಶಿಯೇಶನ್ ಬಿಜಾಪುರ: ಚಳಿಗಾಲದಲ್ಲಿ ಬಡವರಿಗೆ ಬ್ಲಾಂಕೆಟ್ ವಿತರಣೆ

 ಕೆಜಿಪಿಎ ಅಸೋಶಿಯೇಶನ್ ಬಿಜಾಪುರ: ಚಳಿಗಾಲದಲ್ಲಿ ಬಡವರಿಗೆ ಬ್ಲಾಂಕೆಟ್ ವಿತರಣೆ


ಬಿಜಾಪುರ: ಕೆಜೆಪಿಎ ಅಸೋಸಿಯೇಶನ್ ಬಿಜಾಪುರ ವತಿಯಿಂದ  ಬಡ ಹಾಗೂ ಆಶ್ರಯವಿಲ್ಲದ ವ್ಯಕ್ತಿಗಳಿಗೆ ಚಳಿಗಾಲದ ಬ್ಲಾಂಕೆಟ್ ವಿತರಣೆ ಕಾರ್ಯಕ್ರಮವು ನಗರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಹೆದ್ದಾರಿ ಪಕ್ಕದ ಫುಟ್‌ಪಾತದಲ್ಲಿ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ದರ್ಗಾ, ಮಂದಿರದಲ್ಲಿ,  ನಿದ್ರಿಸುತ್ತಿರುವ ಬಡಜನರ ನೆರವಿಗೆ ಬಂದ ಸಂಘಟನೆಯ ಕಾರ್ಯಕರ್ತರು, ತಕ್ಷಣವೇ ಬ್ಲಾಂಕೆಟ್‌ಗಳನ್ನು ವಿತರಿಸಿ, ಸಾಮಾಜಿಕ ಕಳಕಳಿಯ ಉದಾಹರಣೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಕಾರ್ಯದರ್ಶಿ ಜಿಯಾ ಪಠಾಣ್ ಚಳಿಗಾಲದಲ್ಲಿ ಬಡವರು ಹೆಚ್ಚಿನ ತೊಂದರೆ ಅನುಭವಿಸುತ್ತಾರೆ. ನಮ್ಮ ಸಣ್ಣ ಸಹಾಯದಿಂದ ಅವರು ಚಳಿಯ ತೀವ್ರತೆಯಿಂದ ತಪ್ಪಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ಕೆಜಿಪಿಎ ಅಸೋಸಿಯಶನ್ ಸದಸ್ಯರು ಹೊದಿಕೆ‌ ವಿತರಣೆ ಕಾರ್ಯವನ್ನು ಪ್ರತಿವರ್ಷವೂ ನಡೆಸುತ್ತಾ ಬಂದಿದ್ದಾರೆ. ವಿಶೇಷವಾಗಿ ಡಿಸೆಂಬರ್ ತಿಂಗಳಲ್ಲಿ ಈ ಕೆಲಸವನ್ನು ಮಾಡುತ್ತಾರೆ. ಏಕೆಂದರೆ ಡಿಸೆಂಬರ್ ಬಂತೆಂದರೆ ಎಲ್ಲೆಲ್ಲೂ ಚಳಿ ಹೆಚ್ಚಾಗಿರಲಿದ್ದು, ಈ ವೇಳೆ ಅನೇಕರು ಮನೆಯಿಂದ ಹೊರಗೆ ಬರಲು ಸಹ ಹಿಂಜರಿಯುತ್ತಾರೆ. ಇಂತಹ ಸಂದರ್ಭದಲ್ಲಿ ಮನೆ ಇಲ್ಲದೆ ಎಲ್ಲೆಂದರಲ್ಲಿ ಬದುಕು ದೂಡುವ ನಿರಾಶ್ರಿತ ಜನರಿಗೆ ನೆರವಾಗುವ ಉದ್ದೇಶದಿಂದ ಕೆಜಿಪಿಎ  ಸದಸ್ಯರು ಸದ್ದಿಲ್ಲದೆ ಹೊದಿಕೆ ವಿತರಣೆ ಮಾಡುತ್ತಾ ಬಂದಿದ್ದಾರೆ.



ಈ ಕಾರ್ಯಕ್ರಮದಲ್ಲಿ ಸಂಘಟನೆಯ ಸದಸ್ಯರು, ಸ್ಥಳೀಯ ನಾಯಕರು, ಮತ್ತು ಹಲವಾರು ಹಿತೈಷಿಗಳು ಪಾಲ್ಗೊಂಡಿದ್ದರು. ಫುಟ್‌ಪಾತದಲ್ಲಿ ಬಡವರ ಜೊತೆ ನಿಂತು ಅವರ ಮಾತು ಕೇಳಿದ ಕಾರ್ಯಕರ್ತರು, ಮುಂದಿನ ದಿನಗಳಲ್ಲಿ ಈ ರೀತಿಯ ಮತ್ತಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಾಗಿ ಭರವಸೆ ನೀಡಿದರು.

ಈ ಕಾರ್ಯವು ಹಲವರ ಪ್ರಶಂಸೆಯನ್ನು ಗಳಿಸಿತು, ಮತ್ತು ಸಾರ್ವಜನಿಕರಲ್ಲಿ ಸಾಮಾಜಿಕ ಜಾಗೃತಿಯ ಸಂದೇಶವನ್ನು ಸಾರುವಲ್ಲಿ ಯಶಸ್ವಿಯಾಯಿತು. ಪ್ರತಿದಿನ ರಾತ್ರಿ 9:30 ರಿಂದ ತಡರಾತ್ರಿ 12 ಗಂಟೆವರೆಗೂ ಸಹ ಈ ಕಾರ್ಯವನ್ನು ಮಾಡುತ್ತಾರೆ. 

ಈ ಸಂದರ್ಭದಲ್ಲಿ ಕೆಜಿಪಿಎ ಅಸೋಸಿಯೇಷನ್ ಜೈಂಟ್ ಸೆಕ್ರೆಟರಿ  ಸೈಯದ್ ಖಾದರಿ ಗುಡಗುಂಟಿ, ನವೀದ ಶೇಖ್ ಸೇರಿದಂತೆ ಅನೇಕರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು