ಇಂಡಿ ಪುರಸಭೆಯ ಮುಖ್ಯಾಧಿಕಾರಿ ಶಿವಾನಂದ ಪುಜಾರಿ ಅವರ ವತಿಯಿಂದ ದನಗಳು ಮಾಲೀಕರಿಗೆ ನೋಟಿಸ್.

 ಇಂಡಿ. ಪಟ್ಟಣ ಬಹುತೇಕ ರಸ್ತೆಗಳಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು ವಾಹನ ಸವಾರರು, ಜನರು, ಮಕ್ಕಳು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ 30ರಿಂದ 40 ದನಗಳು ನಿತ್ಯ ಕಂಡು ಬರುತ್ತವೆ. ರಸ್ತೆ ಮೇಲೆ ಕುಳಿತರೆ ಮೇಲೆ ಏಳುವುದೇ ಇಲ್ಲ.



ಪಟ್ಟಣದ ಪ್ರಮುಖ ರಸ್ತೆಗಳಾದ ಸಿಂದಗಿ ರಸ್ತೆ, ವಿಜಯಪುರ ರಸ್ತೆ, ಅಗರಖೇಡ ರಸ್ತೆ, ಚಡಚಣ ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಬಿಡಾಡಿ ದನಗಳ ಓಡಾಡಿಕೊಂಡಿವೆ. ಅಲ್ಲದೆ ಬಸವೇಶ್ವರ ವೃತ್ತದಲ್ಲಿ  ನಿಲ್ದಾಣದಲ್ಲಿ,  ರಸ್ತೆ ಮೇಲೆ ಕುಳಿತುಕೊಳ್ಳುವ ದನಗಳು ವಾಹನ ಸವಾರರಿಗೆ ಕಂಟಕವಾಗಿ ಪರಿಣಮಿಸಿವೆ. ಕೆಲವೊಮ್ಮೆ ವಾಹನಗಳು ದನಗಳ ಕಾಲುಗಳ ಮೇಲೆಯೇ ಹಾದು ಹೋಗಿರುವ ಘಟನೆಗಳೂ ನಡೆದಿವೆ. ಆದರೂ ದನಗಳ ಮಾಲೀಕರು ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. 

ಗಾಂಧಿ ವೃತ್ತದಲ್ಲಿಯ  ತರಕಾರಿ ಮಾರುಕಟ್ಟೆಯಲಂತೂ ಬಿಡಾಡಿ ದನಗಳ ಹಾವಳಿ ವಿಪರೀತವಾಗಿದೆ. ಮಾರಟಕ್ಕೆ ಇಟ್ಟ ಹಣ್ಣು–ತರಕಾರಿಗಳನ್ನು ತಿನ್ನಲು ನುಗ್ಗಿ ಬರುತ್ತವೆ. ದನಗಳನ್ನು ಮಾರುಕಟ್ಟೆಯಿಂದ ಓಡಿಸಲು ವ್ಯಾಪಾರಿಗಳು ಹರಸಾಹಸ ಪಡುವಂತಾಗಿದೆ. ಒಂದು ಕಡೆ ಓಡಿಸಿದರೆ ಮತ್ತೊಂದು ಅಂಗಡಿಗಳಿಗೆ ನುಗ್ಗುತ್ತವೆ. ನಿತ್ಯ ವ್ಯಾಪಾರ ಮಾಡುವುದಕ್ಕಿಂತ ಹೆಚ್ಚಾಗಿ ದನ ಓಡಿಸುವುದೇ ದೊಡ್ಡ ಕೆಲಸವಾಗಿದೆ. ಸಂತೆಯ ದಿನ ವ್ಯಾಪಾರಕ್ಕೆ ಬಂದ ಮಕ್ಕಳು, ಮಹಿಳೆಯರು, ವೃದ್ಧರು ತೊಂದರೆ ಅನುಭವಿಸುತ್ತಿದ್ದಾರೆ.ಸೇರಿದಂತೆ ವಿವಿಧ ವಾರ್ಡಗಲ್ಲಿ ಕೂಡಾ ದನಗಳ ಹಾಗೂ ಹಂದಿಗಳ ಹಾವಳಿ ಹೆಚ್ಚಾಗಿದ್ದರಿಂದ ವಾಹನಗಳಿಗೆ ಹಾಗೂ ಸಾರ್ವಜನಿಕರಿಗೆ, ಹಿರಿಯ ನಾಗರಿಕರಿಗೆ, ವಿದ್ಯಾರ್ಥಿಗಳಿಗೆ ತಿವೃ ತೊಂದರೆಯಾಗುತಿದೆ.

ಈ ಸಂಬಂಧ  ಪುರಸಭೆ ವತಿಯಿಂದ  ದನಗಳ ಮಾಲೀಕರಿಗೆ ನೋಟಿಸ್ ನೀಡಲಾಗಿದೆ. ಕೂಡಲೆ ಸಂಬಂದ ಪಟ್ಟ ಮಾಲೀಕರು ತಮ್ಮ ದನಗಳನ್ನು ಹಾಗೂ ಹಂದಿಗಳನ್ನು ರಸ್ತೆಗಳ ಮೇಲೆ ಬಿಡದೆ ಮುಂಜಾಗೃತ ಕ್ರಮಕೈಗೊಳ್ಳಬೇಕು ಇಲ್ಲಾ 7 ದಿನಗಳಲ್ಲಿ ಬೇರೆಡೆ ಸಾಗಿಸಬೇಕು. ಒಂದು ವೇಳೆ ಈ ಅವದಿಯಲ್ಲಿ ಸಾಗಿಸದೆ ಇದ್ದಲ್ಲಿ ದನಗಳನ್ನು ಗೋಶಾಲೆಗೆ ಇನ್ನೂ ಹಂದಿಗಳನ್ನು ಬೇರೆಡೆ ಸಾಗಿಸಲಾಗುವುದು. ಇವುಗಳನ್ನು ಯಾವುದೆ ಕಾರಣಕ್ಕೂ ಮರಳಿ ಕೊಡುವುದಿಲ್ಲ ಎಂದು ಮುಖ್ಯಾಧಿಕಾರಿ ಶಿವಾನಂದ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು