ನಿರಂತರ ಯೋಗಾಭ್ಯಾಸದಿಂದ ಮಕ್ಕಳಲ್ಲಿ ಆತ್ಮವಿಶ್ವಾಸ ವೃದ್ಧಿ-ಬಿ ಎಸ್ ಪಾಟೀಲ

 ನಿರಂತರ ಯೋಗಾಭ್ಯಾಸದಿಂದ ಮಕ್ಕಳಲ್ಲಿ ಆತ್ಮವಿಶ್ವಾಸ ವೃದ್ಧಿ-ಬಿ ಎಸ್ ಪಾಟೀಲ



ಇಂಡಿ: ಯೋಗವು ಮಕ್ಕಳಲ್ಲಿ ಮಾನಸಿಕ, ಆಧ್ಯಾತ್ಮಿಕ, ದೈಹಿಕ ಮತ್ತು ಭಾವನಾತ್ಮಕ ಯೋಗಕ್ಷೇಮವನ್ನು ಬೆಳೆಸಿ,

ಸಕಾರಾತ್ಮಕ ಆರೋಗ್ಯಕರ ಜೀವನವನ್ನು ಉತ್ತೇಜಿಸುತ್ತದೆ ಎಂದು ಯೋಗ ಶಿಕ್ಷಕ ಬಿ ಎಸ್ ಪಾಟೀಲ ಹೇಳಿದರು. 

        ಶನಿವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಯ ವತಿಯಿಂದ ಹಮ್ಮಿಕೊಂಡ 'ಅಂಗೈಯಲ್ಲಿ ಆರೋಗ್ಯ-ಯೋಗ ಕಾರ್ಯಕ್ರಮ' ಉದ್ಘಾಟಿಸಿ ಮಾತನಾಡಿದರು.

          ನಿರಂತರ ಯೋಗಾಭ್ಯಾಸವು ಮಕ್ಕಳಲ್ಲಿ ಆತ್ಮವಿಶ್ವಾಸ, ಉತ್ತಮ ಸಂವಹನ, ತಂಡ ಮನೋಭಾವದ ಮೌಲ್ಯಗಳನ್ನು ಹೆಚ್ಚಿಸುತ್ತದೆ. ಯೋಗದಿಂದ ರೋಗ ನಿರೋಧಕ ಶಕ್ತಿ ಕೂಡ ಬಲಗೊಳ್ಳುತ್ತದೆ ಎಂದು ಹೇಳಿದರು. 

        ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಯೋಗ ಪದ್ಧತಿ ಭಾರತದ ಆಸ್ತಿ, ಭಾರತವು ವಿಶ್ವಕ್ಕೆ ಯೋಗದ ಮೂಲಕ ಶಾಂತಿಯನ್ನು ರಫ್ತು ಮಾಡಿದೆ. ಯೋಗದಿಂದ ಮಕ್ಕಳಲ್ಲಿ ಶಕ್ತಿ, ಸಹಿಷ್ಣುತೆ, ಆತ್ಮವಿಶ್ವಾಸ ಬೆಳೆಯುತ್ತದೆ. ಜತೆಗೆ ಮಕ್ಕಳಿಗೆ ಶಿಸ್ತುಬದ್ಧ ಜೀವನ ರೂಢಿಸುತ್ತದೆ ಎಂದು ಹೇಳಿದರು.


      ಶಿಕ್ಷಕ ಎಸ್ ಆರ್ ಚಾಳೇಕರ ಮಾತನಾಡಿ, ಆಧುನಿಕ ಜೀವನ ಪದ್ಧತಿಯಲ್ಲಿ ಒತ್ತಡ ಹಾಗೂ ಆಹಾರ ಪದ್ಧತಿಯಿಂದಾಗಿ ದೇಹ ಸದೃಢವಾಗಿರಲು ಸಾಧ್ಯವಾಗುತ್ತಿಲ್ಲ. ಪೂರ್ಣ ಆಯಸ್ಸು ಪಡೆಯಬೇಕಾದರೆ ಯೋಗಕ್ಕೆ ಆಧ್ಯತೆ ನೀಡಬೇಕು ಎಂದು ತಿಳಿಸಿದರು.

        ಕೆಬಿಎಸ್ ಎಸ್ ಡಿ ಎಂ ಸಿ ಅಧ್ಯಕ್ಷ ಮಾಳಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ರಮೇಶ ಮಠಪತಿ, ಸದಸ್ಯ ರಾಜಶೇಖರ ಗುಡಿ, ಮುಖ್ಯ ಶಿಕ್ಷಕರಾದ ಅನಿಲ ಪತಂಗಿ, ವ್ಹಿ ವೈ ಪತ್ತಾರ ಹಾಗೂ ಶಿಕ್ಷಕರಾದ ಎಸ್ ಎಂ ಪಂಚಮುಖಿ, ಶಾಂತೇಶ ಹಳಗುಣಕಿ, ಜೆ ಸಿ ಗುಣಕಿ, ಎಸ್ ಎನ್ ಡಂಗಿ, ಸಾವಿತ್ರಿ ಸಂಗಮದ, ಎಫ್ ಎ ಹೊರ್ತಿ, ಎಸ್ ವ್ಹಿ ಬೆನೂರ, ಎಸ್ ಬಿ ಕುಲಕರ್ಣಿ, ಎಸ್ ಡಿ ಬಿರಾದಾರ, ಸುಮಿತ್ರಾ ನಂದಗೊಂಡ, ಸುರೇಶ ದೊಡ್ಯಾಳಕರ, ಶೃದ್ಧಾ ಬಂಕಲಗಾ, ಬಿ ಎಸ್ ಹೊಸೂರ, ಪ್ರಜ್ವಲ್ ಕುಲಕರ್ಣಿ ಸೇರಿದಂತೆ ಶಾಲಾ ಮಕ್ಕಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಮಕ್ಕಳಿಗೆ ವಿವಿಧ ಯೋಗಾಸನಗಳನ್ನು ಮಾಡಿಸಲಾಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು