ಶಿವಾಜಿಯ ಮಾತೃಪ್ರೇಮ, ದೇಶಭಕ್ತಿ ಎಲ್ಲರಿಗೂ ಸ್ಪೂರ್ತಿ -ಸಂತೋಷ ಬಂಡೆ
ಶಿವಾಜಿಯ ಮಾತೃಪ್ರೇಮ, ದೇಶಭಕ್ತಿ ಎಲ್ಲರಿಗೂ ಸ್ಪೂರ್ತಿ
-ಸಂತೋಷ ಬಂಡೆ
ಇಂಡಿ: ಶಿವಾಜಿಯ ಆದರ್ಶ ವ್ಯಕ್ತಿತ್ವ, ಸಾಹಸ, ದೇಶಪ್ರೇಮದ ಜತೆಗೆ ಅವರ ಜೀವನ ಚರಿತ್ರೆಯನ್ನು ಇಂದಿನ ಪೀಳಿಗೆಗೆ ಪರಿಣಾಮಕಾರಿಯಾಗಿ ಪರಿಚಯಿಸಿ, ಮಕ್ಕಳಲ್ಲಿ ಧೈರ್ಯ, ಸ್ಥೈರ್ಯ, ದೇಶಾಭಿಮಾನ ಮೂಡಿಸಲು ಪ್ರೇರೇಪಿಸಬೇಕು ಎಂದು ಶಿಕ್ಷಕ ಸಂತೋಷ ಬಂಡೆ ತಿಳಿಸಿದರು.
ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಬುಧವಾರದಂದು ಹಮ್ಮಿಕೊಂಡ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆಯನ್ನು ಉದ್ಧೇಶಿಸಿ ಮಾತನಾಡಿದರು.
ಬಲಿಷ್ಠ ಭಾರತ ನಿರ್ಮಾಣದಲ್ಲಿ ಅವಿರತ ಶ್ರಮಿಸಿದವರಲ್ಲಿ ಛತ್ರಪತಿ ಶಿವಾಜಿ ಕೂಡಾ ಒಬ್ಬರು.ಸೇವೆ ಮತ್ತು ಹೋರಾಟದ ಮೂಲಕ ಎಲ್ಲರ ಮನಗೆದ್ದ ಶಿವಾಜಿ ಮಹಾರಾಜರು ಸದ್ಗುಣಗಳ ಸಾಕಾರಮೂರ್ತಿ ಆಗಿದ್ದರು. ಮಹಿಳೆಯರಿಗೆ ಪ್ರಥಮ ಆದ್ಯತೆ ನೀಡಿದ್ದ ಶಿವಾಜಿಯ ಮಾತೃಪ್ರೇಮ, ದೇಶಭಕ್ತಿ ಎಲ್ಲರಿಗೂ ಸ್ಪೂರ್ತಿಯಾಗಿದೆ.
ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಎಸ್ ಎಸ್ ಅರಬ ಮಾತನಾಡಿ, ದೇಶದ ಎಲ್ಲ ಧರ್ಮಗಳನ್ನು ಗೌರವಾಧಾರಗಳಿಂದ ಕಾಣುತ್ತಿದ್ದ ಛತ್ರಪತಿ ಶಿವಾಜಿ ಮಹಾರಾಜರ ಶೌರ್ಯ, ದಕ್ಷ ಆಡಳಿತ ಎಲ್ಲರಿಗೂ ಪ್ರೇರಣೆ. ಭಾರತದ ಸಂಸ್ಕೃತಿ, ಪರಂಪರೆಗೆ ಧಕ್ಕೆಯುಂಟಾದಾಗ ಅದನ್ನು ರಕ್ಷಿಸಿದ ಕೀರ್ತಿ ಶಿವಾಜಿ ಮಹಾರಾಜರಿಗೆ ಸಲ್ಲುತ್ತದೆ ಎಂದು ತಿಳಿಸಿದರು.
ಶಿಕ್ಷಕರಾದ ಎನ್ ಬಿ ಚೌಧರಿ, ಎಸ್ ಪಿ ಪೂಜಾರಿ, ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.


ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ