ಪಹಲ್‌ಗಾಂನಲ್ಲಿ ನಡೆದ ಉಗ್ರವಾದಿ ದಾಳಿಗೆ ಖಂಡನೆ ವ್ಯಕ್ತಪಡಿಸಿದ ಇಂಡಿ ಯೂತ್ ಕಾವರೇಜ್ ಸಂಘಟನೆ.

 ಇಂಡಿ.  ಪಹಲ್‌ಗಾಂನಲ್ಲಿ ನಡೆದ ಉಗ್ರವಾದಿ ದಾಳಿಗೆ ಖಂಡನೆ ವ್ಯಕ್ತಪಡಿಸಿದ ಇಂಡಿ ಯೂತ್ ಕಾವರೇಜ್ ಸಂಘಟನೆ, ಈ ಉಗ್ರ ಕೃತ್ಯಗಳ ವಿರುದ್ಧ ತೀವ್ರ ಕ್ರಮ ಕೈಗೊಳ್ಳಬೇಕೆಂದು ಸರ್ಕಾರವನ್ನು ಆಗ್ರಹಿಸಿದರು. 

ಈ ಸಂದರ್ಭದಲ್ಲಿ ತಮ್ಮ ಪ್ರಾಣವನ್ನು ಬಲಿದಾನ ಮಾಡಿದ ಶಹೀದರಿಗೆ ಗೌರವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆ ಮುಖಂಡರು "ಭಾರತದ ಭದ್ರತೆ ಮತ್ತು ಶಾಂತಿಯು ನಮ್ಮ ಪ್ರಥಮ ಪ್ರಧಾನತೆಯಾಗಿದೆ. ಉಗ್ರರಿಗೆ ತಕ್ಕ ಪಾಠ ಕಲಿಸುವಂತೆ ನಾವು ಸರ್ಕಾರವನ್ನು ಒತ್ತಾಯಿಸುತ್ತೇವೆ. ಉಗ್ರವಾದಿ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು ಶಹೀದರಾದ ನಮ್ಮ ಸಹೋದರರಿಗೆ  ನ್ಯಾಯಾಸಿಗಬೇಕು ಎಂದು ಹೇಳಿದರು.

ಯುವಕರು ಕೇಂದ್ರ ಸರ್ಕಾರ ಮತ್ತು ರಕ್ಷಣಾ ಇಲಾಖೆಗೆ ಮನವಿ ಸಲ್ಲಿಸುತ್ತಿದ್ದು, ಭವಿಷ್ಯದಲ್ಲಿ ಇಂಥಹ ದಾಳೆಗಳನ್ನು ತಪ್ಪಿಸಲು ಗಟ್ಟಿಯಾದ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಉಗ್ರರ ನೆಲೆಗಳನ್ನು ಧ್ವಂಸಗೊಳಿಸಲು ಮತ್ತು ಭದ್ರತಾ ವ್ಯವಸ್ಥೆ ಮತ್ತಷ್ಟು ಬಲಪಡಿಸಲು ಮನವಿ ಮಾಡಲಾಗಿದೆ.

ಈ ಕಾರ್ಯಕ್ರಮದಲ್ಲಿ ಯುವಕರ ಹೆಚ್ಚಿನ ಹಾಜರಾತಿ ಕಂಡುಬಂದಿತು ಮತ್ತು ದೇಶಭಕ್ತಿಯಿಂದ ತುಂಬಿದ ಘೋಷಣೆಗಳೊಂದಿಗೆ ಶಾಂತಿಯುತ ಪ್ರತಿಭಟನೆ ನಡೆಯಿತು. ಹೀಗೆ, ದೇಶದ ಏಕತೆ ಮತ್ತು ಭದ್ರತೆಗೆ ಬೆಂಬಲ ಸೂಚಿಸುವ ಮೂಲಕ, ಇಂಡಿಯಾ ಯೂತ್ ಕಾನ್ವರ್ಜ್ ಸಂಘಟನೆ ಒಂದು ಶಕ್ತಿಶಾಲಿ ಸಂದೇಶವನ್ನು ನೀಡಿದೆ.

ಈ ಸಂದರ್ಭದಲ್ಲಿ  ಇಲಿಯಾಸ ಬೋರಾಮಣಿ, ಹುಸೇನ ಜಮಾದಾರ,  ಜಾಕೀರ ಮಲಗಾಣ, ಸಮೀರ್ ಶೇಖ್, ಮುಜ್ಮಿಮಿಲ್ ಬಾಗವಾನ, ಹುಸೇನ ಬೇನೂರ,  ನವಾಜ ಮಕಾಂದಾರ, ಅಮಜ್ದ್ ಪಠಾಣ, ಹಾಜಿ ಬಾಗವಾನ, ಫರೂಜ್ ಮುಜಾವಾರ, ಅಬ್ದುಲ್ ಆಸ್ಟೇಕರ, ಇರಶಾದ ಸಾಲೋಟಗಿ, ಖಾಜಿ ಸರ್ ಸೇರಿದಂತೆ ಅನೇಕರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು