ಗುಜರಾತ್ನ ಅಹಮದಾಬಾದ್ನಿಂದ ಗ್ಯಾಟ್ರಿಕ್ (ಇಂಗ್ಲೆಡ್)ಗೆ ಹೋಗುತ್ತಿದ್ದ ಏರ್ ಇಂಡಿಯಾ ಎಐ 171 ವಿಮಾನ ಇಂದು ಮಧ್ಯಾಹ್ನ ಟೇಕ್ ಆಫ್ ಆದ ತಕ್ಷಣ ಪತನಗೊಂಡಿತು.
ಅಹಮದಾಬಾದ್: ಗುಜರಾತ್ನ ಅಹಮದಾಬಾದ್ನಿಂದ ಗ್ಯಾಟ್ರಿಕ್ (ಇಂಗ್ಲೆಡ್)ಗೆ ಹೋಗುತ್ತಿದ್ದ ಏರ್ ಇಂಡಿಯಾ ಎಐ 171 ವಿಮಾನ ಇಂದು ಮಧ್ಯಾಹ್ನ ಟೇಕ್ ಆಫ್ ಆದ ತಕ್ಷಣ ಪತನಗೊಂಡಿತು. 12 ಸಿಬ್ಬಂದಿ ಸೇರಿದಂತೆ 242 ಜನರು ಈ ವಿಮಾನದಲ್ಲಿದ್ದರು. ಈ ವಿಮಾನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಇದ್ದ ಡಾಕ್ಟರ್ ಹಾಸ್ಟೆಲ್ನೊಳಗೆ ನುಗ್ಗಿದೆ. ಇದರಿಂದ ವಿಮಾನದಲ್ಲಿರುವ ಪ್ರಯಾಣಿಕರು ಮಾತ್ರವಲ್ಲದೆ 15 ವೈದ್ಯಕೀಯ ವಿದ್ಯಾರ್ಥಿಗಳು ಕೂಡ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚಿನ ಅತಿ ದುರಂತವಾದ ವಿಮಾನ ಅಪಘಾತ ಇದಾಗಿದೆ.
ಇಂದು ವಿಮಾನ ಅಪಘಾತಕ್ಕೀಡಾದಾಗ 12 ಸಿಬ್ಬಂದಿ ಸೇರಿದಂತೆ ಸುಮಾರು 242 ಜನರು ಅಹಮದಾಬಾದ್-ಲಂಡನ್ ವಿಮಾನದಲ್ಲಿದ್ದರು. ವಿಮಾನ ಅಪಘಾತದಲ್ಲಿ ಯಾರೂ ಬದುಕುಳಿದಿಲ್ಲ ಎಂದು ಅಹಮದಾಬಾದ್ ಪೊಲೀಸ್ ಆಯುಕ್ತರು ಹೇಳಿದ್ದಾರೆ. ಈ ಘಟನೆಯ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಜರಾತ್ ಸಿಎಂ, ರಾಜ್ಯದ ಗೃಹ ಸಚಿವರು ಮತ್ತು ಡಿಜಿಪಿ ಅವರೊಂದಿಗೆ ಮಾತನಾಡಿದ್ದಾರೆ. ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಕೂಡ ಇಂದಿನ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ವಿಮಾನದಲ್ಲಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, 7 ಪೋರ್ಚುಗೀಸ್ ಮತ್ತು ಒಬ್ಬ ಕೆನಡಾದ ಪ್ರಯಾಣಿಕ ಇದ್ದರು. ಅಪಘಾತ ಸಂಭವಿಸಿದಾಗ ಅಹಮದಾಬಾದ್ನ ಮೇಘನಿನಗರ ಪ್ರದೇಶದ ಬಳಿಯ ಧಾರ್ಪುರದಿಂದ ಭಾರೀ ಹೊಗೆ ಕಾಣಿಸಿಕೊಂಡಿತ್ತು.
ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು, ತುರ್ತು ಪ್ರತಿಕ್ರಿಯೆ ತಂಡಗಳನ್ನು ನಿಯೋಜಿಸಲಾಗುತ್ತಿದೆ. ಅಪಘಾತದ ಕಾರಣವನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಅಪಘಾತದ ಬಗ್ಗೆ ಗೃಹ ಸಚಿವ ಅಮಿತ್ ಶಾ ಮತ್ತು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರೊಂದಿಗೆ ಮಾತನಾಡಿದ್ದಾರೆ. ಈಗಾಗಲೇ ಗೃಹ ಸಚಿವ ಅಮಿತ್ ಶಾ ಅಹಮದಾಬಾದ್ಗೆ ಹೊರಟಿದ್ದಾರೆ. ಗುಜರಾತ್ ಸಿಎಂ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಅಹಮದಾಬಾದ್ ಬಳಿ ಏರ್ ಇಂಡಿಯಾ ವಿಮಾನ ಅಪಘಾತದ ನಂತರ ನಾಗರಿಕ ಆಡಳಿತಕ್ಕೆ ಸಹಾಯ ಮಾಡಲು ಸುಮಾರು 130 ಸಿಬ್ಬಂದಿಯನ್ನು ಒಳಗೊಂಡ ಭಾರತೀಯ ಸೇನಾ ತಂಡಗಳನ್ನು ನಿಯೋಜಿಸಲಾಗಿದೆ. ಭಾರತೀಯ ಸೇನೆಯ ಪ್ರತಿಕ್ರಿಯೆಯಲ್ಲಿ ಭಗ್ನಾವಶೇಷಗಳ ತೆರವಿಗೆ ಜೆಸಿಬಿಗಳನ್ನು ಹೊಂದಿರುವ ಎಂಜಿನಿಯರಿÂಗ್ ತಂಡಗಳು, ವೈದ್ಯರು ಮತ್ತು ಅರೆವೈದ್ಯರನ್ನು ಒಳಗೊಂಡ ವೈದ್ಯಕೀಯ ತಂಡಗಳು, ಕ್ವಿಕ್ ಆಕ್ಷನ್ ತಂಡಗಳು (ಕಿಂಖಿ ಗಳು), ಅಗ್ನಿಶಾಮಕ ಉಪಕರಣಗಳು ಮತ್ತು ನೀರಿನ ಬೌಸರ್ಗಳನ್ನು ಹೊಂದಿರುವ ಅಗ್ನಿಶಾಮಕ ಹೊರಟಿದ್ದಾರೆ.ಗುಜರಾತ್ ಸಿಎಂ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಅಹಮದಾಬಾದ್ ಬಳಿ ಏರ್ ಇಂಡಿಯಾ ವಿಮಾನ ಅಪಘಾತದ ನಂತರ ನಾಗರಿಕ ಆಡಳಿತಕ್ಕೆ ಸಹಾಯ ಮಾಡಲು ಸುಮಾರು 130 ಸಿಬ್ಬಂದಿಯನ್ನು ಒಳಗೊಂಡ ಭಾರತೀಯ ಸೇನಾ ತಂಡಗಳನ್ನು ನಿಯೋಜಿಸಲಾಗಿದೆ. ಭಾರತೀಯ ಸೇನೆಯ ಪ್ರತಿಕ್ರಿಯೆಯಲ್ಲಿ ಭಗ್ನಾವಶೇಷಗಳ ತೆರವಿಗೆ ಜೆಸಿಬಿಗಳನ್ನು ಹೊಂದಿರುವ ಎಂಜಿನಿಯರಿÂಗ್ ತಂಡಗಳು, ವೈದ್ಯರು ಮತ್ತು ಅರೆವೈದ್ಯರನ್ನು ಒಳಗೊಂಡ ವೈದ್ಯಕೀಯ ತಂಡಗಳು, ಕ್ವಿಕ್ ಆಕ್ಷನ್ ತಂಡಗಳು (ಕಿಂಖಿ ಗಳು), ಅಗ್ನಿಶಾಮಕ ಉಪಕರಣಗಳು ಮತ್ತು ನೀರಿನ ಬೌಸರ್ಗಳನ್ನು ಹೊಂದಿರುವ ಅಗ್ನಿಶಾಮಕ ಉಪಕರಣಗಳು ಮತ್ತು ಸ್ಥಳ ನಿರ್ವಹಣೆಗಾಗಿ ಪೊವೊಸ್ಟ್ ಸಿಬ್ಬಂದಿ ಸೇರಿದ್ದಾರೆ. ಮಿಲಿಟರಿ ಆಸ್ಪತ್ರೆಯನ್ನು ಸಹ ಸನ್ನದ್ಧವಾಗಿ ಇರಿಸಲಾಗಿದೆ.
ಈ ದುರಂತ ಘಟನೆಗೆ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಸಲಹೆಗಾರ ಮುಹಮ್ಮದ್ ಯೂನಸ್, ಸಿಂಗಾಪುರದ ಪ್ರಧಾನಿ, ಫ್ರಾನ್ಸ್ ಅಧ್ಯಕ್ಷ, ರಷ್ಯಾ ಅಧ್ಯಕ್ಷ, ಆಸ್ಟ್ರೇಲಿಯಾ ಪ್ರಧಾನಿ ಮುಂತಾದ ಜಾಗತಿಕ ನಾಯಕರು ಕೂಡ ಸಂತಾಪ ಸೂಚಿಸಿದ್ದಾರೆ.


ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ