ಕತ್ತಲಿನಿಂದ ಬೆಳಕಿನೆಡೆಗೆ, ಅಜ್ಞಾನದಿಂದ ಜ್ಞಾನದೆಡೆಗೆ ದಾರಿ ತೋರಿಸುವವನೇ ನೈಜ ಗುರು ಎಂದು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಚಟಚಣ. ಕತ್ತಲಿನಿಂದ ಬೆಳಕಿನೆಡೆಗೆ, ಅಜ್ಞಾನದಿಂದ ಜ್ಞಾನದೆಡೆಗೆ ದಾರಿ ತೋರಿಸುವವನೇ ನೈಜ ಗುರು ಎಂದು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಶಿಕ್ಷಕರು ದೇಶ ಕಟ್ಟುವ, ಸೃಜನಶೀಲ ಸಮಾಜವನ್ನು ನಿರ್ಮಿಸುವ, ಮಾನವೀಯ ಮೌಲ್ಯಗಳಿಗೆ ಮನ್ನಣೆ ನೀಡುವ ಶಿಷ್ಯರನ್ನು ರಾಷ್ಟ್ರಕ್ಕೆ ಅರ್ಪಿಸುವ ಕೆಲಸ ಸದಾ ಮಾಡುತ್ತಿರಬೇಕು. ದೇಶದ ನಿಜವಾದ ಭವಿಷ್ಯ ಅಡಗಿರುವುದು ವಿದ್ಯಾರ್ಥಿಗಳ ಕೈಯಲ್ಲಿ. ಅಂತಹ ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾಗಿದೆ ಎಂದು ಹೇಳಿದರು
ಅಧ್ಯಕ್ಷತೆ ವಹಿಸಿ ಮಾತನಾಡಿದ ನಾಗಠಾಣ ಶಾಸಕ ವಿಠಲ್ ಕಟಕಡೊಂಡ ಗ್ರಾಮೀಣ ಭಾಗದಲ್ಲಿ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಶಿಕ್ಷಕರ ಪಾತ್ರ ಅಪಾರವಾಗಿದ್ದು, ನಿವೃತ್ತಿ ನಂತರವೂ ಮಕ್ಕಳಿಗೆ ಜ್ಞಾನ ಹಂಚುವ ಕಾರ್ಯವನ್ನು ನಿರಂತರವಾಗಿ ಮಾಡಬೇಕು
ಸರ್ಕಾರಿ ಸೇವೆಯಲ್ಲಿ 30 ವರ್ಷಗಳ ಕಾಲ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗುತ್ತಿರುವುದು ಸುಲಭದ ಮಾತಲ್ಲ. ಅವರ ಸಾಧನೆ ಹೆಚ್ಚಿದೆ. ಮುಂದೆಯೂ ಮಕ್ಕಳಿಗೆ ಮಾರ್ಗದರ್ಶನ ಮಾಡುವುದನ್ನು ಮುಂದುವರಿಸಬೇಕು. ನಿವೃತ್ತ ಜೀವನವನ್ನು ಉತ್ತಮವಾಗಿ ಕಳೆಯಬೇಕು’ ಎಂದು ಹೇಳಿದರು.
ಪ್ರಸ್ತಾವಿಕ ಮಾತನಾಡಿದ ಶಿಕ್ಷಕರ ಸೋಸೈಟಿ ಅಧ್ಯಕ್ಷ ಎಸ್.ಎಸ್.ಪಾಟೀಲ ಮೌಲ್ಯಯುತ ಶಿಕ್ಷಣ ನೀಡುತ್ತಾ ಶಿಕ್ಷಣ ರಂಗದಲ್ಲಿ ಹಲವಾರು ಚೇತನಗಳಿಗೆ ಸ್ಫೂರ್ತಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗುವ ಶಿಕ್ಷಕರು ತಮ್ಮ ನಿವೃತ್ತಿ ಜೀವನವನ್ನು ಸಮಾಜಮುಖಿ ಚಿಂತನೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಬದುಕು ಸಾರ್ಥಕ ಪಡಿಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ ಅಧ್ಯಕ್ಷ ಮಲ್ಲು ಧೋತ್ರೆ, ಬಾಬೂಗೌಡ ಪಾಟೀಲ, ಕಾಂತುಗೌಡ ಪಾಟೀಲ, ಶ್ರೀಮತಿ ಸುಜಾತಾ ಹೂನೂರ, ಬಸವರಾಜ ನಾಡಗೇರಿ, ಯೂನುಸ ಅಲಿ ಮಕಾಂದಾರ, ಬಿಮೆಸ್.ಮಜಗಿ, ವ್ಹಿ.ಆಯ್.ಕಾಂಬಳೆ, ಎಸ್.ಎಸ್.ಮಾವಿನಮರ, ಎ.ಎಸ್.ಸೊನಗಿ, ಬಸವಂತ ಉಮರಾಣಿ, ಎಸ್.ಜೆ.ಪಾಟೀಲ, ಎಸ್.ಬಿ.ಪಾಟೀಲ, ಶ್ರೀಮತಿ ಎಸ್.ಬಿ.ತೇಲಿ, ಆರ್.ಎಸ್.ಗೊಡೆಕಾರ, ಡಿ.ಎಸ್.ಬಗಲಿ, ಸುರೇಶ ಕರ್ಜಗಿ, ವಿಜಯಕುಮಾರ ಕಾಂಬಳೆ ಸೇರಿದಂತೆ ತಾಲೂಕಿನ ಅನೇಕ ಶಿಕ್ಷಕರು ಇದ್ದರು.


ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ