ಅಂಜುಮನ್ ಕಮಿಟಿಯ ಕಾಂಪ್ಲೆಕ್ಸಿನ ಮೇಲೆ ನಡೆಯುತ್ತಿರುವ ಅನಧಿಕೃತವಾಗಿ ಕಟ್ಟಡ ಕಾರ್ಯವನ್ನು ಕೂಡಲೇ ನಿಲ್ಲಿಸಲು ಆಗ್ರಹ

 ಇಂಡಿ: ಪಟ್ಟಣದ ಮಹಾವೀರ ವೃತ್ತದಲ್ಲಿ ಇರುವ   ಅಂಜುಮನ್ ಕಮಿಟಿಯ ಕಾಂಪ್ಲೆಕ್ಸಿನ ಮೇಲೆ  ನಡೆಯುತ್ತಿರುವ  ಅನಧಿಕೃತವಾಗಿ  ಕಟ್ಟಡ ಕಾರ್ಯವನ್ನು ಕೂಡಲೇ ನಿಲ್ಲಿಸಲು ಇಂಡಿ ತಹಶೀಲ್ದಾರ್ ಮತ್ತು ಪುರಸಭೆ ವತಿಯಿಂದ ನೋಟಿಸ್ ಜಾರಿಗೊಳಿಸಲಾಗಿದೆ. ಆದರೂ ಕೂಡ ಅಂಜುಮನ್ ಕಮಿಟಿಯು ಈ ನೋಟಿಸ್‌ಗಳನ್ನೂ ಲೆಕ್ಕಿಸದೇ ತಾವು ನಿರ್ಧರಿಸಿದಂತೆ ಕೆಲಸ ಮುಂದುವರೆಸುತ್ತಿದೆ ಕೂಡಲೆ ಇಂಡಿ ಪುರಸಭೆ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಸ್ಥಳಿಯ ನಿವಾಸಿ  ಸಗೀರ ಮುಲ್ಲಾ ಆಗ್ರಹಿಸಿದರು. . 



ಈಗಿರುವ ಅಂಜುಮನ್ ಕಮಿಟಿಯ  ಅವಧಿ ಎರಡು ತಿಂಗಳು ಹಿಂದೆ ಮುಕ್ತಾಯವಾಗಿದೆ. ಆದರೆ ಇಲ್ಲೆಯವರೆಗೂ ನೂತನ ಸಮಿತಿಯ ಚುನಾವಣೆ ಜರುಗದಿರುವುದರಿಂದ ಈ ಸಮಿತಿಯು ಯಾವುದೇ ತೀರ್ಮಾನ ತೆಗೆದುಕೊಳ್ಳಲು ಅರ್ಹವಲ್ಲ. ಇತ್ತ, ಈ ಸಮಿತಿಯು ತಮ್ಮ ಅವಧಿ ಮುಗಿದರೂ, ಕಾನೂನು ಮೀರಿ ಕೃತ್ಯಗಳಲ್ಲಿ ತೊಡಗಿಕೊಂಡಿದ್ದು ಅಂಜುಮನ್ ಕಮಿಟಿಯ ಆಸ್ತಿಗೆ ನಷ್ಟವನ್ನುಂಟು ಮಾಡುತ್ತಿದೆ.

ಅಂಜುಮನ್ ಕಮಿಟಿಯ ಸದಸ್ಯರು ಪಟ್ಟಣದ ಕೆಲ ಜನರಿಂದ ಹಣವನ್ನು ಪಡೆದು ಪುರಸಭೆ  ಅನುಮತಿ ಇಲ್ಲದೆ ಅನಧಿಕೃತ ರೀತಿಯಲ್ಲಿ ಅಂಗಡಿಗಳನ್ನು ನಿರ್ಮಾಣ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪ ಮಾಡಿದರು. 

ಅಂಜುಮನ್ ಸಮಿತಿಯು ತಕ್ಷಣವೇ ಈ ಅನಧಿಕೃತವಾಗಿ ನಿರ್ಮಿಸುತ್ತಿದ್ದ  ನಿರ್ಮಾಣವನ್ನು ನಿಲ್ಲಿಸದಿದ್ದರೆ, ಸರ್ಕಾರದ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಇದು ಮುಂದಿನ ದಿನಗಳಲ್ಲಿ ಅಂಜುಮನ್ ಸಂಸ್ಥೆಯೇ ಸಂಕಷ್ಟಕ್ಕೆ ಸಿಲುಕುವಂತಹ ಪರಿಸ್ಥಿತಿಯನ್ನುಂಟು ಮಾಡಲಿದೆ. ಆದಷ್ಟು ಬೇಗನೆ ವಕ್ಪ್ ಅಧಿಕಾರಿಗಳು ಹಾಗೂ ಇಂಡಿ ಅಂಜುಮನ್ ಕಮಿಟಿಯವರು ಇಂಡಿ ಅಂಜುಮನ್ ಇಸ್ಲಾಂ ಕಮಿಟಿಗೆ ಚುನಾವಣೆ ಘೋಷಣೆ ಮಾಡಿ ಹೊಸ ಕಮಿಟಿ ರಚಣೆ ಮಾಡಬೇಕು ಎಂದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು