ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”
ಬಾಯಿಯ ನೈರ್ಮಲ್ಯದ ಮಹತ್ವ & ಜಾಗೃತಿ ದಿನ; ಇಂಡಿ: "ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ” ಆಗಸ್ಟ್ 1 ರಂದು ಪೆರಿಯೊಡಾಂಟಾಲಜಿಯ ಜನಕ, ಪ್ರಚಾರಕ, ಪ್ರವರ್ತಕ, ಭಾರತೀಯ ಪೆರಿಯೊಡಾಂಟಿಕ್ಸ್ನ ಮತ್ತು ಇಂಡಿಯನ್ ಸೊಸೈಟಿ ಆಫ್ ಪೆರಿಯೊಡಾಂಟಾಲಜಿಯ ಸಂಸ್ಥಾಪಕ, ಅಧ್ಯಕ್ಷರಾಗಿದ್ದ ಡಾ. ಜಿ.ಬಿ.ಶಾಂಕ್ವಾಲ್ಕರ್ ಅವರ ಜನ್ಮ ವಾರ್ಷಿಕೋತ್ಸವದ ಸ್ಮರಣಾರ್ಥವಾಗಿ, ದೇಶದಾದ್ಯಂತ ಮೌಖಿಕ ನೈರ್ಮಲ್ಯ, ದಿನವನ್ನು ಆಚರಿಸಲಾಗುತ್ತದೆ. ಈ ಆಚರಣೆಯ ಅಂಗವಾಗಿ, ಹಲ್ಲಿನ/ಬಾಯಿಯ ರೋಗಗಳ ತಡೆಗಟ್ಟುವಿಕೆಯ ಬಗ್ಗೆ, ಜಾಗೃತಿ & ಉತ್ತಮ ಬಾಯಿಯ ಆರೋಗ್ಯವನ್ನು ಕಾಪಾಡಿಕೊಳ್ಳಲು ಬಾಯಿಯ ನೈರ್ಮಲ್ಯದ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಜ್ವರ, ಕೆಮ್ಮು, ನೆಗಡಿ, ಕೈ-ಕಾಲು ನೋವು ಗಂಟಲು ನೋವು ತಲೆನೋವು ಹೀಗೆ ದೇಹದಲ್ಲಿ ಏನೇ ನೋವು ಕಾಣಿಸಿಕೊಂಡರೂ ಒಂದೆರಡು ದಿನದಲ್ಲಿ ಇದು ಕಡಿಮೆಯಾಗದೆ ಇದ್ದರೆ ಆಗ ವೈದ್ಯರಲ್ಲಿಗೆ ಹೋಗಿ ಚಿಕಿತ್ಸೆ ಪಡೆದುಕೊಳ್ಳುವಿರಿ,ಕಾಳಜಿ ವಹಿಸುವಿರಿ ಆದರೆ ಬಾಯಿಯ ವಿಚಾರಕ್ಕೆ ಬಂದಾಗ ಮಾತ್ರ ಹೆಚ್ಚಿನವರು ಇದರ ಬಗ್ಗೆ ಕಾಳಜಿ ವಹಿಸುವುದನ್ನು ಸಂಪೂರ್ಣವಾಗಿ ಮರೆತುಬಿಡುತ್ತಾರೆ. ಬಾಯಿಯಲ್ಲಿರುವಂತಹ ಹಲ್ಲುಗಳು, ಒಸಡುಗಳು ನಮ್ಮ ಸಂಪೂರ್ಣ ಆರೋಗ್ಯದ ಮೇಲೆ ಪರಿಣಾಮ ಬೀರುವವು. ಆದರೆ ಹೆಚ್ಚಿನವರ ಪ್ರಕಾರ ಆಹಾರ ಜಗಿಯಲು ಮತ್ತು ಮು...