ಒಂದು ತಿಂಗಳಲ್ಲಿ ಡಾ. ಬಿ.ಆರ್.ಅಂಬೇಡ್ಕರ ವೃತ್ತ ಕಾಮಗಾರಿ ಪ್ರಾರಂಭಿಸಬೇಕು. ಇಲ್ಲ ಎಂದರೆ ಶಾಸಕರಿಗೆ ಹಾಗೂ ಅಧಿಕಾರಿಗಳಿಗೆ ಮುತ್ತಿಗೆ ಹಾಕಲಾಗುವುದು.

 ಇಂಡಿ. ಒಂದು ತಿಂಗಳೊಳಗೆ ಡಾ. ಬಾಬಾ ಸಾಹೇಬ ಅಂಬೇಡ್ಕರ್ ವತ್ತದ ಕಾಮಗಾರಿ ಹಾಗೂ ಬುದ್ಧ ವಿಹಾರ ಕಾಮಗಾರಿ ಪ್ರಾರಂಭಿಸಬೇಕು ಎಂದು ನಾಗೇಶ ತಳಕೇರಿ ಆಗ್ರಹಿಸಿದ್ದಾರೆ.


ಡಾ. ಬಾಬಾ ಸಾಹೇಬ ಅಂಬೇಡ್ಕರ್ ವೃತ್ತ ಹಾಗೂ ಬುದ್ಧ ವಿಹಾರ ಕಾಮಗಾರಿಯನ್ನು ಒಂದು ತಿಂಗಳ ಒಳಗೆ ಪ್ರಾರಂಭಿಸಬೇಕು ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಆರ್.ಪಿ.ಐ.) ಪಕ್ಷದ ಅಧ್ಯಕ್ಷ ನಾಗೇಶ ತಳಕೇರಿ ಆಗ್ರಹಿಸಿದ್ದಾರೆ. ಇಲ್ಲವಾದಲ್ಲಿ  ಶಾಸಕರು ಹಾಗೂ ಅಧಿಕಾರಿಗಳಿಗೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ್ದಾರೆ.

ಪಟ್ಟಣದ ಅಮರ್ ಇಂಟರ್ನ್ಯಾಷನಲ್ ಹೋಟೇಲ್‌ನಲ್ಲಿ ಬುಧವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, “ಪ್ರತಿ ಬಾರಿಯೂ ನಮ್ಮ ದಲಿತ ಸಮಾಜಕ್ಕೆ ಅನ್ಯಾಯವಾಗುತ್ತಲೇ ಬಂದಿದೆ. ಅಭಿವೃದ್ಧಿ ಯೋಜನೆಗಳಲ್ಲಿ ನಮ್ಮ ಹಕ್ಕಿನ ಯೋಜನೆಗಳನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ. ಕಾಂಗ್ರೆಸ್ ಪಕ್ಷ ನಮಗೆ ಕೇವಲ ಚುನಾವಣೆಯ ವೇಳೆಯಲ್ಲಿ ಮತ ಕೇಳುವುದಕ್ಕಾಗಿ ಮಾತ್ರ ನೆನಪಿಸುತ್ತದೆ, ಆದರೆ ನಮ್ಮ ಬೇಡಿಕೆಗಳನ್ನು ನಿರಂತರವಾಗಿ ಕಡೆಗಣಿಸಿದೆ,” ಎಂದು ಆರೋಪಿಸಿದರು.

ಸಮಾಜದ ಹಿತಕ್ಕಾಗಿ ಹೋರಾಟ, “ಅಂಬೇಡ್ಕರ್ ವೃತ್ತ ಹಾಗೂ ಬುದ್ಧ ವಿಹಾರ ನಿರ್ಮಾಣ ನಮ್ಮ ಸಮುದಾಯದ ಆತ್ಮಗೌರವದ ಪ್ರಶ್ನೆ. ನಾವು ಸಾಕಷ್ಟು ಬಾರಿ ಅಧಿಕಾರಿಗಳು ಹಾಗೂ ಸಂಬಂಧಿಸಿದವರನ್ನು ಕೇಳಿದರು ಉಡಾಪೆಯ ಉತ್ತರ ನೀಡುತ್ತಾ ಬಂದಿದ್ದಾರೆ. ಸರ್ಕಾರ ತಕ್ಷಣ ಕ್ರಮ ಕೈಗೊಂಡು ಕೆಲಸ ಪ್ರಾರಂಭಿಸಬೇಕು,” ಎಂದು ಒತ್ತಾಯಿಸಿದರು.

“ಒಂದು ತಿಂಗಳ ಗಡುವು ಕೊಟ್ಟಿದ್ದೇವೆ. ಅದರೊಳಗೆ ಕಾಮಗಾರಿ ಪ್ರಾರಂಭವಾಗದಿದ್ದರೆ, ಶಾಸಕರ ಮನೆಗೆ ಹಾಗೂ ಸರ್ಕಾರಿ ಕಚೇರಿಗಳಿಗೆ ಮುತ್ತಿಗೆ ಹಾಕಿ, ಬೃಹತ್ ಪ್ರತಿಭಟನೆ ನಡೆಸುತ್ತೇವೆ. ಹೋರಾಟಕ್ಕೆ ಜಿಲ್ಲೆಯ ಎಲ್ಲ ದಲಿತ ಸಂಘಟನೆಗಳು, ವಿವಿಧ ಎಲ್ಲಾ ಸಂಘಟನೆ ಸೇರಿ ಪ್ರತಿಭಟನೆ ಮಾಡಲಾಗುವುದು. 

ಈ ಸಂದರ್ಭದಲ್ಲಿ ವಿರುಪಾಕ್ಷ ಕಾಳೆ, ಅಂಬೇಡ್ಕರ್ ಕಾಂಬಳೆ, ಗೌತಮ ಬನಸೋಡೆ, ಬಾಬು ಕಾಂಬಳೆ, ಪರಸುರಾಮ ಕಾಂಬಳೆ, ಮರೆಪ್ಪ ಮೇಲಿನಕೆರಿ, ಆಕಾಶ ಝಳಕಿ, ಹುಚ್ಚಪ್ಪ ಕಾಳೆ, ಇಬ್ರಾಹಿಮ್ ಮಸಿಬನಾಳ, ನಿತೀನ ಬನಸೋಡೆ, ಮಲಕಪ್ಪ ತಳಕೇರಿ,  ಪರಶುರಾಮ ಎಂಟಮಾಣ, ಸೇರಿದಂತೆ ಇತರರು ಇದ್ದರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು