ವಿದ್ಯಾರ್ಥಿಗಳು ಓದುವ-ಬರೆಯುವ-ಜ್ಞಾನ ಬೆಳೆಸಿಕೊಳ್ಳುವ ಜೊತೆಗೆ ಬದುಕಿಗೆ ಅಗತ್ಯವಾದ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಉತ್ತಮ ಪ್ರಜೆಗಳಾಗಬೇಕು’ ಎಂದು ಶಿಕ್ಷಕ ಸಂತೋಷ ಬಂಡೆ

 ಬದುಕಿಗೆ ಅಗತ್ಯವಾದ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ- ಸಂತೋಷ ಬಂಡೆ


ಇಂಡಿ: 'ವಿದ್ಯಾರ್ಥಿಗಳು ಓದುವ-ಬರೆಯುವ-ಜ್ಞಾನ ಬೆಳೆಸಿಕೊಳ್ಳುವ ಜೊತೆಗೆ ಬದುಕಿಗೆ ಅಗತ್ಯವಾದ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಉತ್ತಮ ಪ್ರಜೆಗಳಾಗಬೇಕು’ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.

      ಪಟ್ಟಣದ ಅಂಜುಮನ್ ಪ್ರೌಢಶಾಲೆಯಲ್ಲಿ ಬುಧವಾರದಂದು ಸಮಾಜ ಸೇವಕ ಹಸನ ಮುಜಾವರ ಇವರ ವತಿಯಿಂದ  'ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್, ಪೆನ್ನು ವಿತರಣೆ' ಕಾರ್ಯಕ್ರಮದ ಉಪನ್ಯಾಸಕರಾಗಿ ಅವರು ಮಾತನಾಡಿದರು.


      'ವಿದ್ಯಾರ್ಥಿಗಳು ಜೀವನದಲ್ಲಿ ನಿರ್ದಿಷ್ಟ ಗುರಿ ಹೊಂದುವ ಜೊತೆಗೆ ಗುರುಭಕ್ತಿ, ಶ್ರದ್ಧೆ, ಆಸಕ್ತಿ, ಸ್ವಯಂ ಶಿಸ್ತನ್ನು ಮೈಗೂಡಿಸಿಕೊಂಡು ಸಾಧನೆಯ ಮಾರ್ಗದಲ್ಲಿ ಸಾಗಬೇಕು. ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು'ಎಂದು ಹೇಳಿದರು.


    ಅಂಜುಮನ್ ಇಸ್ಲಾಂ ಕಮೀಟಿ  ನಿರ್ದೇಶಕ ಹಾಗೂ ಬ್ಲಾಕ ಕಾಂಗ್ರೆಸ್ ಅಧ್ಯಕ್ಷ  ಜಾವೇದ್ ಮೊಮಿನ್ ಮಾತನಾಡಿ, ಮಕ್ಕಳಿಗೆ ಉಚಿತ ನೋಟ್ ಬುಕ್,ಪೆನ್ನುಗಳನ್ನು ವಿತರಿಸುವುದು ಸಮಾಜಮುಖಿ ಕಾರ್ಯವಾಗಿದೆ. ಹಸನ್ ಮುಜಾವರ ಅವರ ಈ ಸಮಾಜ ಸೇವೆ ನಿಜಕ್ಕೂ ಮಾದರಿಯಾಗಿದೆ. ಇಂದಿನ ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ನೀಡಿದರೆ ಅವರು ಸುಂದರ ಬದುಕನ್ನು ಕಟ್ಟಿಕೊಳ್ಳಬಲ್ಲರು ಎಂದು ಹೇಳಿದರು.


      ಧರ್ಮ ಗುರುಗಳಾದ ಮುಫ್ತಿ ಅಬ್ದುಲ್ ರೆಹಮಾನ್ ಅರಬ ಸಾನಿಧ್ಯ ವಹಿಸಿ ಮಾತನಾಡಿ,  ಮಕ್ಕಳ ಕಲಿಕೆಯಲ್ಲಿ ಸಮುದಾಯದ ಪಾತ್ರ  ಮುಖ್ಯವಾಗಿದ್ದು, ಸಮುದಾಯದ ಬೆಂಬಲದಿಂದ, ಮಕ್ಕಳು ಉತ್ತಮವಾಗಿ ಕಲಿತು, ಸತ್ಪ್ರಜೆಗಳಾಗಿ ಬೆಳೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.

      ಸಮಾಜ ಸೇವಕ ಹಸನ್ ಮುಜಾವರ ಮಾತನಾಡಿ, ಈ ಸಂಸ್ಥೆಯಲ್ಲಿ 10 ನೇ ವರ್ಗದ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಯ ಪಿಯುಸಿ ಪ್ರಥಮ ವರ್ಷದ ಪ್ರವೇಶ ಫೀ ಯನ್ನು ಸ್ವತಃ ನಾನೇ ಭರಿಸಿ,ಆ ವಿದ್ಯಾರ್ಥಿಯ ಓದಿಗೆ ಪ್ರೋತ್ಸಾಹ ನೀಡುವದಾಗಿ ವಾಗ್ದಾನ ಮಾಡಿದರು. 


     ಅಂಜುಮನ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಹುಸೇನ್ ಜಮಾದಾರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯ ಶಿಕ್ಷಕ ಮುಜೀಬ್ ಬಾಗವಾನ, ಶಿಕ್ಷಕರಾದ ಹುಮಾಯೂನ್ ಬಿಳವಾರ, ಸುಫಿಯಾ ಚಂದರಗಿ, ಫಾತಿಮಾ ಬೇಗಂ ಘೋಡೆ ಸವಾರ, ಫಯಾಜ್ಅಹ್ಮದ್ ಜಮಖಾನೆ, ಸಲೀಂ ಅತ್ತಾರ, ಸದ್ದಾಂ ಜಮಾದಾರ, ಜಹಾಂಗೀರ ದೇಸಾಯಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಹಸನ್ ಮುಜಾವರ ಅವರು ಕಾಣಿಕೆ ನೀಡಿದ ನೋಟ್ ಬುಕ್, ಪೆನ್ನನ್ನು ಎಲ್ಲ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು