ವಿದ್ಯಾರ್ಥಿ ಬೆಳವಣಿಗೆಯಲ್ಲಿ ಕ್ರೀಡೆಗಳು ಮುಖ್ಯ ಇಂಡಿ ಶಾಸಕರ ಸಹೋದರರಾದ ಬಸವಂತ್ರಾಯಗೌಡ ಪಾಟೀಲರು ಹೇಳಿದರು.
ವಿದ್ಯಾರ್ಥಿ ಬೆಳವಣಿಗೆಯಲ್ಲಿ ಕ್ರೀಡೆಗಳು ಮುಖ್ಯ
ಅಗರಖೇಡ ಕ್ಲಸ್ಟರ್ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ.
ಇಂಡಿ: ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆಗಳು ಪ್ರಮುಖ ಪಾತ್ರ ವಹಿಸುತ್ತೇವೆ ಎಂದು ಇಂಡಿ ವಿಧಾನಸಭೆ ಮತಕ್ಷೇತ್ರದ ಶಾಸಕರ ಸಹೋದರರಾದ ಬಸವಂತ್ರಾಯಗೌಡ ಪಾಟೀಲರು ಹೇಳಿದರು.
. ಅವರು ಜಿಲ್ಲಾ ಪಂಚಾಯಿತಿ, ವಿಜಯಪುರ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಇಂಡಿ ಹಾಗೂ ಅಗರಖೇಡ ಕ್ಲಸ್ಟರ್ ಇವರ ಅದೀನದಲ್ಲಿ ಪಡನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಅಗರಖೇಡ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಕ್ರೀಡೆಯಲ್ಲಿ ದೈಹಿಕವಾಗಿ ಗಟ್ಟಿಯಾಗಿ ಆರೋಗ್ಯವಂತರಾಗಿದ್ದರೆ ಮಾತ್ರ ಕ್ರೀಡಾ ಚಟುವಟಿಕೆಗಳನ್ನು ಕೊಡಗುತ್ತಾ, ಉತ್ತಮ ಶಿಕ್ಷಣ ಪಡೆಯಲು ಸಾಧ್ಯ. ಅದಕ್ಕಾಗಿ ಮಕ್ಕಳು ಓದಿನ ಜೊತೆಗೆ ಪ್ರತಿದಿನ ಶಾಲೆಯಲ್ಲಿ ನಡೆಯುವ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಂಡು ಉತ್ತಮ ಆರೋಗ್ಯವಂತರಾಗಿರಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಶಾಲೆಯ ಎಸ ಡಿ ಎಂ ಸಿ ಅಧ್ಯಕ್ಷ ಭೀಮಶಂಕರ ಭೈರಜಿ ಮಾತನಾಡಿ, ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ.ಅದಕ್ಕಾಗಿ ಎರಡನ್ನು ಸಮಾನವಾಗಿ ಸ್ವೀಕರಿಸಿ, ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಂಡು, ಸ್ಪರ್ಧೆಯನ್ನು ಕ್ರೀಡಾ ಮನೋಭಾವದಿಂದ ಸ್ವೀಕರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಎಂ ಎಸ್ ಚವ್ಹಾಣ ಪ್ರಸ್ತಾವಿಕವಾಗಿ ಮಾತನಾಡಿದರು. ಗ್ರಾಮದ ಪ್ರಮುಖರಾದ ಮಾಜಿ ತಾ ಪಂ ಸದಸ್ಯ ಕಲ್ಲನಗೌಡ ಬಿರಾದಾರ ಸಸಿಗೆ ನೀರೆರುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ನಿಕಟ ಪೂರ್ವ ಬಿ ಆರ್ ಪಿ ಆರ್ ವಿ ಪಾಟೀಲ, ಪಿಕೆಪಿಎಸ್ ಅಧ್ಯಕ್ಷ ಸಾತಪ್ಪ ಲಿಗಾಡೆ,ಮಾಜಿ ಸೈನಿಕ ಚನ್ನಬಸಪ್ಪ ಸಾಲೋಟಗಿ, ಅಗರಖೇಡ ಗ್ರಾಮದ ಶಾಲೆಗಳ ಮುಖ್ಯ ಗುರುಗಳಾದ ಎಂ ಐ ಉಮರಾಣಿ, ಎಸ್ ಬಿ ರಾವಜಿ, ಎಸ್ ಡಿ ಎಂ ಸಿ ಉಪಾಧ್ಯಕ್ಷ ಮಹಾಂತೇಶ ಅವರಾದಿ, ಮಾಜಿ ಗ್ರಾಫಂ ಅಧ್ಯಕ್ಷ ಷಡಕ್ಷರಿ ಮೇತ್ರಿ, ರಾಜ್ಯ ದೈಹಿಕ ಶಿಕ್ಷಕರ ಸಂಘದ ಕಾರ್ಯದರ್ಶಿಗಳಾದ ಶಂಕರ ಚವ್ಹಾಣ, ಶಾಲೆಯ ಮುಖ್ಯ ಗುರುಗಳಾದ ಕೆ ಆಯ್ ಉಮರಾಣಿ, ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಎಲ್ ಟಿ ವೀರಶೆಟ್ಟಿ,ಎಂ ಸಿ ಸಾವಳಗಿ, ಎಚ್ ಬಿ ಕಾಗವಾಡಕರ, ಅಶೋಕ ಬನಸೋಡೆ ಶಿಕ್ಷಕರು ವೇದಿಕೆಯಲ್ಲಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಇದಕ್ಕೂ ಮುಂಚೆ ದೈಹಿಕ ಶಿಕ್ಷಕರಾದ ಆರ್ ಕೆ ಹಳ್ಳಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಶಾಲೆಯ ಸಹ ಶಿಕ್ಷಕರಾದ ಶಹಾಜಿ ಪಾಟೀಲ, ಎನ್ ಕೆ ಸಕ್ಕರಶೆಟ್ಟಿ, ಎಸ್ಎಸ್ ಅವರಾದಿ, ಉಪಸ್ಥಿತರಿದ್ದರು. ಅಗರಖೇಡ ಕ್ಲಸ್ಟರ್ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದರು.



ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ