ನುಲಿಯ ಚಂದಯ್ಯನವರದ್ದು ಬಹುಮುಖ ವ್ಯಕ್ತಿತ್ವ- ಸಂತೋಷ ಬಂಡೆ

 ನುಲಿಯ ಚಂದಯ್ಯನವರದ್ದು ಬಹುಮುಖ ವ್ಯಕ್ತಿತ್ವ-

ಸಂತೋಷ ಬಂಡೆ

ಇಂಡಿ: ನುಲಿಯ ಚಂದಯ್ಯನವರ ವಚನಗಳಲ್ಲಿ ಅಡಗಿದ

ಗುರು-ಲಿಂಗ-ಜಂಗಮ ಮತ್ತು ಕಾಯಕ-ದಾಸೋಹ ಎಂಬ ಚಿಂತನೆಗಳು ಇಂದಿಗೂ ಪ್ರಸ್ತುತ. ಅವರ ಬದುಕು ನಮಗೆಲ್ಲ ಆದರ್ಶವಾಗಬೇಕು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.

       ಅವರು ಶನಿವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ನುಲಿಯ ಚಂದಯ್ಯನವರ ಜಯಂತಿ ಆಚರಣೆಗೆ ಚಾಲನೆ ನೀಡಿ ಮಾತನಾಡಿದರು.

      ಚಂದಯ್ಯನವರದ್ದು ಬಹುಮುಖ ವ್ಯಕ್ತಿತ್ವ. ಅವರ ನಡೆ ನುಡಿ ಕಾಯಕನಿಷ್ಠೆ, ನಿಜ ಭಕ್ತಿ ಇಂದಿಗೂ ಸಕಾಲಿಕವಾಗಿದೆ.

ಅಪ್ರಾಮಾಣಿಕತೆ, ಆಡಂಬರದ ಭಕ್ತಿ, ನಡೆ ನುಡಿಯಲ್ಲಿನ ವ್ಯತ್ಯಾಸದ ಬಗ್ಗೆ ಕಟುವಾಗಿ ಟೀಕಿಸಿದ ನುಲಿಯ ಚಂದಯ್ಯನವರ ವಚನಗಳು ಸಾರ್ವಕಾಲಿಕ ಶ್ರೇಷ್ಠತೆ ಹೊಂದಿವೆ ಎಂದು ಹೇಳಿದರು.

       ಶಿಕ್ಷಕ ಎಸ್ ಆರ್ ಚಾಳೇಕರ ಮಾತನಾಡಿ, ನುಲಿಯ ಚಂದಯ್ಯನವರ ವಚನಗಳು ಸರಳ, ಅರ್ಥಗರ್ಭಿತ ಮತ್ತು ಆಧ್ಯಾತ್ಮಿಕ ಚಿಂತನೆಗಳನ್ನು ಒಳಗೊಂಡಿವೆ.ಅವರ ವಚನಗಳು ಜೀವನದ ಸತ್ಯಗಳನ್ನು ಮತ್ತು ಆಧ್ಯಾತ್ಮಿಕ ಮಾರ್ಗವನ್ನು ಸರಳವಾಗಿ ವಿವರಿಸುತ್ತವೆ ಎಂದು ಹೇಳಿದರು.

         ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಅನಿಲ ಪತಂಗಿ ಮಾತನಾಡಿ, ನುಲಿಯ ಚಂದಯ್ಯನವರ ವಚನಗಳಲ್ಲಿ ಆಧ್ಯಾತ್ಮಿಕ ಚಿಂತನೆ, ಜೀವನದ ಸತ್ಯಗಳಿವೆ. ಅವರ 48 ವಚನಗಳಲ್ಲಿ ಸಮ ಸಮಾಜ ನಿರ್ಮಾಣದ ತಾತ್ವಿಕ ಚಿಂತನೆಗಳಿವೆ. ಕಾಯಕದಿಂದಲೇ ದೇವರನ್ನು ಕಂಡ ಈ ಮಹಾನ್ ಶರಣರ ಬದುಕೇ ಎಲ್ಲರಿಗೂ ಸ್ಫೂರ್ತಿ ಎಂದು ಹೇಳಿದರು.

        ಮುಖ್ಯ ಶಿಕ್ಷಕರು ಹಾಗೂ ಎಲ್ಲ ಶಿಕ್ಷಕರು, ಮಕ್ಕಳು ಭಾಗವಹಿಸಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಂಡಿ: ಪಟ್ಟಣದ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಗೌರವ ಕಾರ್ಯದರ್ಶಿ ಹಾಗೂ ನಿರ್ದೇಶಕ ಮೇಲೆ ಎಫ್.ಐ.ಆರ್.

ಅನೈತಿಕ ಸಂಭಂದ ಹಿನ್ನೆಲೆಯಲ್ಲಿ ಇಂಡಿಯಲ್ಲಿ ಮಹಿಳೆಯ ಹತ್ಯೆಗೈದ ಘಟಣೆ

ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದ ಎದುರುಗಡೆ ಸತತವಾಗಿ 17 ದಿನಗಳಿಂದ ನಡೆಯುತ್ತಿರುವ ಶ್ರೀ ಶಾಂತೇಶ್ವರ ಟ್ರಸ್ಟ್ ಕಮಿಟಿ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಯಶವಂತರಗೌಡ ಪಾಟೀಲ

ಇಂಡಿ ಪಟ್ಟಣದಲ್ಲಿ ಬಿದಿನಾಯಿಗಳ ಹಾವಳಿ ಬೆಚ್ಚಿಬಿದ್ದ ಪಟ್ಟಣದ ಸಾರ್ವಜನಿಕರು

ಪ್ರೊಫೆಸರ್ ಎಸ್.ಎಮ್.ಎಫ್. ಮುಖ್ತಿಯಾರ್ ಸರ್ ಅವರ ನಿಧನ

ಇಂಗಳಗಿ ಪಿಕೆಪಿಎಸ್ ಚುನಾವಣೆಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಆವಿರೋಧ ಆಯ್ಕೆ.

ಬಿ.ಎಲ್.ಈ ಅಸೋಶಿಯಶನ ವತಿಯಿಂದ ಎಸ್.ಎಸ್.ಎಲ್.ಸಿ ಪರಿಕ್ಷೇಯಲ್ಲಿ ಪ್ರಥಮ ದ್ವಿತಿಯ ತೃತಿಯ ಸ್ಥಾನ ಪಡೆದ ವಿದ್ಯಾಥಿಗಳಿಗೆ ಸನ್ಮಾನ.

ಇಂಡಿ ಪುರಸಭೆ ಈಗ ನಗರಸಭೆ – ಶಾಸಕ ಯಶವಂತರಾಯಗೌಡ ಪಾಟೀಲ ಅವರ ಕಠಿಣ ಪ್ರಯತ್ನ ಫಲವಂತ!

ನಮಗೆ ನಮ್ಮ ಶಾಲೆಯ ಶ್ರೇಷ್ಠ ಹಾಗೂ ಶಾಲೆಯ ದೇವ ಮಂದಿರ ನಮ್ಮ ಶಾಲೆಯ ಮಕ್ಕಳೆ ನಮ್ಮ ಜೀವನ ಎಂಬ ನಂಬಿಕೆ ಯೊಂದಿಗೆ ನಾವು ಕೆಲಸ ಮಾಡಿದರೆ ಯಾರಿಗು ಹೆದರುವ ಅವಶ್ಯಕತೆ ಇಲ್ಲಿ ಎಂದು ನಿವೃತ್ತಿ ಶಿಕ್ಷಕ ಎಸ್.ಬಿ.ಗೌರಿ

ಅಧಿಕಾರ ಶಾಶ್ವತ ಅಲ್ಲ ಕೇವಲ ರಾಜಕಾರಣಿಗಳು ಮಾತನಾಡಿದರೆ ಸಾಲದು ನಮ್ಮ ನಡೆ ,ನುಡಿ , ಕೃತಿಯಲ್ಲಿರಬೇಕು